ಮಂಡ್ಯ

ಕೆಆರ್‌ಎಸ್‌ ಬಹುತೇಕ ಭರ್ತಿ: ಹೆಚ್ಚುವರಿ ನೀರು ಹರಿಸಲಾಗುತ್ತಿದೆ ಎಂದ ಉಸ್ತುವಾರಿ ಸಚಿವ

ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ನಾಗಮಂಗಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಬೀಳುತ್ತಿರುವುದರಿಂದ ಕೆ ಆರ್ ಎಸ್ ಅಣೆಕಟ್ಟಿನ ನೀರಿನ ಮಟ್ಟವು 120 ಅಡಿ ದಾಟಿದೆ. ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಹೇಮಾವತಿ ಜಲಾಶಯವೂ ಭರ್ತಿಯಾಗಿರುವುದರಿಂದ ಹೆಚ್ಚುವರಿ 20,000 ಕ್ಯೂಸೆಕ್ ನೀರು ಕೆ ಆರ್ ಎಸ್ ಅಣೆಕಟ್ಟಿಗೆ ಬರುತ್ತಿದೆ. ಕಬಿನಿಯಿಂದ 60,000 ದಿಂದ 70,000 ಕ್ಯೂಸೆಕ್ ನೀರು ಬರುತ್ತಿದೆ. ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಲಾಗುತ್ತಿದೆ.

ಕೆ.ಆ‌ರ್.ಎಸ್ ನಿಂದ ಒಂದು ಲಕ್ಷ ಕ್ಯೂಸೆಕ್ ವರೆಗೂ ನೀರನ್ನು ಬಿಟ್ಟರೆ ಯಾವುದೇ ತೊಂದರೆಯಾಗಲ್ಲ, ಒಂದು ಲಕ್ಷ ಕ್ಯೂಸೆಕ್ಸ್ ಗಿಂತ ಹೆಚ್ಚಿನ ನೀರು ಬಿಡುಗಡೆ ಮಾಡಿದ ಸಂದರ್ಭದಲ್ಲಿ ನದಿ ಪಾತ್ರದಲ್ಲಿರುವ ಜಿಲ್ಲೆಯ ಒಟ್ಟು 92 ಗ್ರಾಮಗಳಿಗೆ ಸಮಸ್ಯೆಯಾಗಬಹುದು. ಶ್ರೀರಂಗಪಟ್ಟಣ ತಾಲ್ಲೂಕು – 53, ಪಾಂಡವಪುರ- 15, ಮಳವಳ್ಳಿ- 21 ಹಾಗೂ ಹೇಮಾವತಿ ಜಲಾಶಯಕ್ಕೆ ಸಂಬಂಧಿಸಿದಂತೆ ಕೆ.ಆ‌ರ್.ಪೇಟೆ – 3 ಗ್ರಾಮಗಳಲ್ಲಿ ಪ್ರವಾಹ ಉಂಟಾಗಿ ತೊಂದರೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ವಿಶೇಷ ಕಾಳಜಿ ವಹಿಸಬೇಕು ಎಂದರು.

ಮುನ್ನೆಚ್ಚರಿಕೆ ಕ್ರಮ ವಹಿಸುವ ಬಗ್ಗೆ ಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಿತಿ ರಚಿಸಿ ಭಿತ್ತಿ ಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.

ಕೆ ಆರ್ ಎಸ್ ನಿಂದ ನಾಲೆಗಳಿಗೆ 1961-62 ನೇ ಸಾಲಿನಲ್ಲಿ 2,13,000 ಕ್ಯೂಸೆಕ್, 1991-92 ನೇ ಸಾಲಿನಲ್ಲಿ 2,11,000 ಕ್ಯೂಸೆಕ್, 2019-20 ನೇ ಸಾಲಿನಲ್ಲಿ 1, 51,000 ಕ್ಯೂಸೆಕ್, 2020-21 ನೇ ಸಾಲಿನಲ್ಲಿ 73,000 ಕ್ಯೂಸೆಕ್ಸ್ ನೀರು ಬಿಡುಗಡರ ಮಾಡಿದ ಸಂದರ್ಭದಲ್ಲಿ ತಗ್ಗು ಪ್ರದೇಶಗಳಲ್ಲಿ ಉಂಟಾಗುವ ತೊಂದರೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ಮಳೆ ಹಾಗೂ ಪ್ರವಾಹದಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ, ತಾಲ್ಲೂಕು ಇಒ, ಗ್ರಾಮ ಪಂಚಾಯಿತಿಯ ಪಿಡಿಒ ಗಳಿಗೆ ತಿಳಿಸಲಾಗಿದೆ. ಶ್ರೀರಂಗಪಟ್ಟಣದ ದೇವಸ್ಥಾನಗಳಿಗೆ ಪ್ರವಾಸಿಗರು ಬರುವುದರಿಂದ ಮುನ್ನೆಚ್ಚರಿಕೆಯಾಗಿ ಹೊಳೆಗಳ ಹತ್ತಿರ ಎಚ್ಚರಿಕೆ ಸೂಚನಾ ಫಲಕಗಳು ಹಾಗೂ ಬ್ಯಾರಿಕೇಡ್ ಅನ್ನು ಅಳವಡಿಸಲು ಸೂಚಿಸಲಾಗಿದೆ.

ಜಿಲ್ಲೆಯಲ್ಲಿರುವ ಎಲ್ಲಾ ಕೆರೆ ಕಟ್ಟೆಗಳನ್ನು ತುಂಬಿಸಲಾಗುವುದು.
ಈಗಾಗಲೇ ಜಿಲ್ಲೆಯ ರೈತರಿಗೆ ಬಿತ್ತನೆ ಬೀಜವನ್ನು ವಿತರಿಸಲು ಸೂಚನೆ ನೀಡಲಾಗಿದ್ದು, ರೈತರಿಗೆ ಯಾವುದೇ ತೊಂದರೆಯಾಗಲ್ಲ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

51 mins ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

1 hour ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

7 hours ago