ಮಂಡ್ಯ

ರಸ್ತೆಗಳ ಅಭಿವೃದ್ಧಿಗೆ ಕ್ರಮ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಕೆಲವು ರಸ್ತೆಗಳು ಗುಂಡಿ ಬಿದ್ದು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಅವುಗಳ ದುರಸ್ತಿ ಪಡಿಸಿ ರಸ್ತೆಗಳ ಅಭಿವೃದ್ಧಿಗೆ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಹೇಳಿದರು.

ಅವರು ಇಂದು ಮಂಡ್ಯ ತಾಲ್ಲೂಕಿನ ಹೊಳಲು ಗ್ರಾಮದಿಂದ ಪಾಂಡವಪುರ ತಾಲ್ಲೂಕು ಜಕ್ಕನಹಳ್ಳಿ ಗ್ರಾಮದವರೆಗೆ ರಸ್ತೆ ತಪಾಸಣೆ ಮಾಡಿ ಜಕ್ಕನಹಳ್ಳಿ ಗ್ರಾಮದಲ್ಲಿ 20 ಕೋಟಿ ರೂ ವೆಚ್ಚದಲ್ಲಿ ಆಧುನೀಕರಣ ಗೊಳ್ಳಲಿರುವ ಹೇಮಾವತಿ ನಾಲೆ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಮಂಡ್ಯ ದಿಂದ ದುದ್ದವರೆಗಿನ ರಸ್ತೆಯು ಸರಿ ಇಲ್ಲದ ಕಾರಣ ಅದರ ತಪಾಸಣೆಯನ್ನು ಇಂದು ಜಿಲ್ಲಾಧಿಕಾರಿ ಅವರು ಶಾಸಕರು, ನ್ಯಾಷನಲ್ ಹೈವೇ ಅವರೊಡನೆ ಪರಿಶೀಲಿಸಿ ತಪಾಸಣೆ ನಡೆಸಿ ಕಾಮಗಾರಿ ಕೈಗೊಳ್ಳಬೇಕು ಎಂದು ತಿಳಿಸಿದರು.

20 ಕೋಟಿ ರೂ ವೆಚ್ಚದಲ್ಲಿ ಆಧುನೀಕರಣ ಗೊಳ್ಳಲಿರುವ ಹೇಮಾವತಿ ನಾಲೆ ಕಾಮಗಾರಿಯನ್ನು ಆದಷ್ಟು ಬೇಗನೆ ಕಾಮಗಾರಿ ಕೈಗೊಳ್ಳುತ್ತೇವೆ ಮತ್ತು ಇದರ ಜೊತೆಗೆ ಇನ್ನೂ ಹಲವಾರು ಅಭಿವೃದ್ಧಿ ಕಾಮಗಾರಿಗ ಕೂಡ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಮೇಲುಕೋಟೆ ವಿಧಾನಸಭಾ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಅವರು ಮಾತನಾಡಿ ಜಕ್ಕನಹಳ್ಳಿ ಗ್ರಾಮಕ್ಕೆ ಆಸ್ಪತ್ರೆಯ ವ್ಯವಸ್ಥೆ ಇಲ್ಲದಿರುವುದರಿಂದ ಜನರಿಗೆ ತೊಂದರೆಯಾಗುತ್ತಿದ್ದು, ಆಸ್ಪತ್ರೆಯ ವ್ಯವಸ್ಥೆ ಆಗಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ಹೇಮಾವತಿ ನಾಲೆ ಆಧುನೀಕರಣ ಕಾಮಗಾರಿಯನ್ನು 20 ಕೋಟಿ ರೂ ವೆಚ್ಚದಲ್ಲಿ ಪ್ರಾರಂಭಿಸಲು ಅನುಮೋದನೆ ನೀಡಲಾಗಿತ್ತು. ಚುನಾವಣೆ ಸೇರಿದಂತೆ ಇನ್ನಿತರೆ ಕಾರಣಗಳಿಂದ ಶಂಕುಸ್ಥಾಪನೆ ತಡವಾಗಿದೆ‌. ಸಾರ್ವಜನಿಕರಿಗೆ ಸಹಾಯಕವಾಗುವ ಹಲವಾರು ಕೆಲಸಗಳನ್ನು ಆದ್ಯತೆಯ ಮೇಲೆ ಮಾಡಲಾಗುವುದು ಎಂದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಸ್ತೆಗಳ ಅಭಿವೃದ್ಧಿ ಕುರಿತಂತೆ ಸಚಿವರ ಗಮನಕ್ಕೆ ತರಲಾಗಿದೆ. ಇದರೊಂದಿಗೆ ಇಂದು ಹೊಳಲು ಗ್ರಾಮದಿಂದ ಜಕ್ಕನಹಳ್ಳಿಯವರೆಗಿನ ರಸ್ತೆ ಪರಿಶೀಲನೆ ನಡೆಸಲಾಗಿದೆ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

11 hours ago