ನಾಗಮಂಗಲ: ಕೃಷಿಗೆ ಸಂಬಂಧಪಟ್ಟ ಸಮಗ್ರ ಮಾಹಿತಿ ನೀಡುವ ರೈತ ಕೇಂದ್ರದ ಸದುಪಯೋಗವನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಚೆಲುವರಾಯಸ್ವಾಮಿ ಕರೆ ನೀಡಿದರು.
ನಾಗಮಂಗಲ ತಾಲೂಕು ಚಿನ್ಯ ಗ್ರಾಮದಲ್ಲಿ ನೂತನವಾಗಿ ರೈತ ಸಂಪರ್ಕ ಕೇಂದ್ರದ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಹಲವು ವರ್ಷಗಳಿಂದಲೂ ಕೃಷಿ ಇಲಾಖೆಗೆ ನೂತನ ಕಟ್ಟಡಗಳು ಇಲ್ಲದ ಕಾರಣ ಜಿಲ್ಲೆ ಮತ್ತು ತಾಲೂಕು ಹೋಬಳಿ ಕೇಂದ್ರಗಳಲ್ಲಿ ರೈತ ಸಂಪರ್ಕ ಕಟ್ಟಡಗಳ ಅನುಷ್ಠಾನ ಮಾಡಲಾಗುತ್ತಿದೆ.
ಈಗಾಗಲೇ ಹಲವೆಡೆ ಕಾಮಗಾರಿಗಳು ನಡೆಯುತ್ತಿದ್ದು, ಕೃಷಿ ಕ್ಷೇತ್ರದಲ್ಲಿ ಹೊಸತನದ ಜೊತೆಗೆ ಸಮಗ್ರ ಕೃಷಿ ಮಾಹಿತಿ ನೀಡುವ ಉದ್ದೇಶವನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಅಶೋಕ್, ಕೃಷಿ ಇಲಾಖೆ ಅಧಿಕಾರಿಗಳು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…
ತಿ.ನರಸೀಪುರ: ಪಟ್ಟಣದ ಕೆಎಸ್ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ; ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ೬,೧೮೩ ವಿದ್ಯಾರ್ಥಿಗಳು ಮಡಿಕೇರಿ: ಮಾ.೧೮ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗ…
ನವೀನ್ ಕುಮಾರ್ ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿರುವುದರಿಂದ ನಷ್ಟ ಎಂಬುದು ರೈತರ ಅಳಲು ಪಿರಿಯಾಪಟ್ಟಣ: ರಾಗಿ ಖರೀದಿ ಕೇಂದ್ರಗಳಲ್ಲಿ…
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…