ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಗೆ ಪೂಜೆ ಸಲ್ಲಿಸಿದ ನಂತರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಾತನಾಡಿ ಸ್ಥಗಿತವಾಗಿದ್ದ ಮೈಶುಗರ್ ಕಾರ್ಖಾನೆಯನ್ನು ಪುನರ್ ಆರಂಭಗೊಳಿಸಲು ಸರ್ಕಾರದಿಂದ ಕಳೆದ ಸಾಲಿನಲ್ಲಿ 50 ಕೋಟಿ ರೂ ನೀಡಲಾಗಿದೆ ಎಂದರು.
2023-24 ನೇ ಸಾಲಿನಲ್ಲಿ 2,41,305 ಮೆ.ಟನ್ ಕಬ್ಬು ನುರಿಸಲಾಗಿರುತ್ತದೆ, ಹಾಗೂ ಕಬ್ಬು ಸರಬರಾಜು ಮಾಡಿದ ರೈತ-ಭಾಂದವರಿಗೆ ಸಂಪೂರ್ಣವಾಗಿ ಹಣವನ್ನು ಪಾವತಿಸಲಾಗಿರುತ್ತದೆ.
ಈ ಬಾರಿ ಸರಿಯಾಗಿ ಮಳೆ ಬಾರದ ಕಾರಣ ಕಬ್ಬಿನ ಕೊರತೆ ಇರುತ್ತದೆ. ಆದರು ಸಹ ಸುಮಾರು 2,50,000 ಮೆ. ಟನ್ ಕಬ್ಬು ನುರಿಸುವ ಉತ್ತಮ ಗುರಿಯನ್ನು ಹೊಂದಲಾಗಿರುತ್ತದೆ. ಪ್ರಸ್ತುತ 1,90,000 ಮುರು ಕಬ್ಬು ಒಪ್ಪಿಗೆಯಾಗಿದ್ದು, ಉಳಿದ ಕಬ್ಬನ್ನು ನಾನ್-ಒಪ್ಪಿಗೆ ಮತ್ತು ಹೊರಜಿಲ್ಲೆಯ ಮೂಲಕ ಕಬ್ಬನ್ನು ನುರಿಸಲಾಗುವುದು ಎಂದರು.
ಕಾರ್ಖಾನೆಯ ಲಾಭ, ನಷ್ಠದ ಆಧಾರದ ಮೇಲೆ ಸದ್ಯಕ್ಕೆ ಕಾರ್ಯನಿರ್ವಹಿಸುವುದು ಕಷ್ಟಕರ. ರೈತರ ಹಿತದೃಷ್ಟಿಯಿಂದ ಸಕ್ಕರೆ ಕಾರ್ಖಾನೆಯನ್ನು ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಕ್ಕರೆ ಕಾರ್ಖಾನೆ ಲಾಭಾದಯಕವಾಗಿ ನಡೆಯಲಿದೆ ಎಂಬ ನಂಬಿಕೆ ಇದೆ ಎಂದರು.
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…