ಬೆಂಗಳೂರು: ನಾಡು, ಹಾಗೂ ನೆಲೆದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಜೊತೆಗೆ ಹೆಚ್ಚು ಅರ್ಥಪೂರ್ಣ, ವೈವಿದ್ಯಮಯವಾಗಿರುವಂತೆ ಮಂಡ್ಯ ಜಿಲ್ಲೆಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಬೇಕಿದೆ ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ವಿಕಾಸ ಸೌಧದ ತಮ್ಮ ಕಚೇರಿಯಲ್ಲಿಂದು ಮಂಡ್ಯ ಜಿಲ್ಲೆಯಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಘಟನೆ ಕುರಿತು ಸಭೆ ನಡೆಸಿದ ಸಚಿವರು ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳನ್ನು ತೊಡಗಿಸಿಕೊಂಡು ಅರ್ಥಪೂರ್ಣವಾಗಿ ಸಮ್ಮೇಳನ ಆಯೋಜಿಸುವಂತೆ ಸಚಿವರಾದ ಎನ್ ಚಲುವರಾಯಸ್ವಾಮಿ ಸೂಚನೆ ನೀಡಿದರು.
ಎಲ್ಲಾ ಸಮಿತಿಗಳಲ್ಲಿ ಸ್ಥಳೀಯ ಶಾಸಕರಿಗೆ ನೇತೃತ್ವ ನೀಡಿ, ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಸೇರ್ಪಡೆ ಮಾಡಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ಸಂಘಟನೆಗಳನ್ನು ಸಹ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕು. ಜೊತೆಗೆ ರಾಜ್ಯದ ಕಲಾವಿದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಚಲುವರಾಯಸ್ವಾಮಿ ಹೇಳಿದರು.
ಎಲ್ಲಾ ಸಮಿತಿಗಳ ನಡುವೆ ಯಾವುದೇ ಗೊಂದಲವಿಲ್ಲದಂತೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು. ಇದು ಇಡೀ ರಾಜ್ಯದ ನುಡಿ ಹಬ್ಬ ಜಿಲ್ಲೆಯಾದ್ಯಂತ ಸಂಭ್ರಮ ಸಡಗರ ಇರುವಂತೆ ಎಲ್ಲಾ ವರ್ಗದವರನ್ನು ಸೇರಿಸಿ ಸಮ್ಮೇಳನ ಸಂಘಟಿಸಿ ಎಂದು ಕರೆ ನೀಡಿದರು.
ಶಾಸಕರಾದ ರಮೇಶ್ ಬಾಬು ಬಂಡಿ ಸಿದ್ದೇಗೌಡ, ಪಿ.ಎಂ ನರೇಂದ್ರ ಸ್ವಾಮಿ, ಉದಯ ಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾದ್ಯಕ್ಷ ನಾಡೋಜ ಮಹೇಶ್ ಜೋಷಿ, ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಅವರು ಸಮ್ಮೇಳನದ ಸಂಘಟನೆ ಕುರಿತು ಮಾಹಿತಿ ಹಾಗೂ ಅಭಿಪ್ರಾಯ, ಸಲಹೆಗಳನ್ನು ನೀಡಿದರು.
ಲಾಂಛನ ರಚಿಸಿದ ಕಲಾವಿದರ ಶಂಕರ್, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಡಾ. ಪಟೇಲ್ ಪಾಂಡು, ನೇ.ಭ ರಾಮಲಿಂಗ ಶೆಟ್ಟಿ, ಮೀರಾ ಶಿವಕುಮಾರ್, ಡಾ ಪದ್ಮಿನಿ ನಾಗರಾಜ್, ಎಂ.ಎಸ್. ಶ್ರೀನಿವಾಸ ಮೂರ್ತಿ ಸಭೆಯಲ್ಲಿ ಹಾಜರಿದ್ದರು
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…