ಮಂಡ್ಯ

ಸಾಹಿತ್ಯ ಸಮ್ಮೇಳನ ನಾಡು-ನೆಲದ ಸಂಸ್ಕೃತಿಯ ಪ್ರತಿಬಿಂಬವಾಗಲಿ: ಚೆಲುವರಾಯಸ್ವಾಮಿ

ಬೆಂಗಳೂರು: ನಾಡು, ಹಾಗೂ‌ ನೆಲೆದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಜೊತೆಗೆ ಹೆಚ್ಚು ಅರ್ಥಪೂರ್ಣ, ವೈವಿದ್ಯಮಯವಾಗಿರುವಂತೆ ಮಂಡ್ಯ ಜಿಲ್ಲೆಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಬೇಕಿದೆ ಎಂದು ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ವಿಕಾಸ ಸೌಧದ ತಮ್ಮ ಕಚೇರಿಯಲ್ಲಿಂದು ಮಂಡ್ಯ ಜಿಲ್ಲೆಯಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂಘಟನೆ ಕುರಿತು ಸಭೆ ನಡೆಸಿದ ಸಚಿವರು ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳನ್ನು ತೊಡಗಿಸಿಕೊಂಡು ಅರ್ಥಪೂರ್ಣವಾಗಿ ಸಮ್ಮೇಳನ ಆಯೋಜಿಸುವಂತೆ ಸಚಿವರಾದ ಎನ್ ಚಲುವರಾಯಸ್ವಾಮಿ ಸೂಚನೆ ನೀಡಿದರು.

ಎಲ್ಲಾ ಸಮಿತಿಗಳಲ್ಲಿ ಸ್ಥಳೀಯ ಶಾಸಕರಿಗೆ ನೇತೃತ್ವ ನೀಡಿ, ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಸೇರ್ಪಡೆ ಮಾಡಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ಸಂಘಟನೆಗಳನ್ನು ಸಹ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕು. ಜೊತೆಗೆ ರಾಜ್ಯದ ಕಲಾವಿದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಚಲುವರಾಯಸ್ವಾಮಿ ಹೇಳಿದರು.

ಎಲ್ಲಾ ಸಮಿತಿಗಳ ನಡುವೆ ಯಾವುದೇ ಗೊಂದಲವಿಲ್ಲದಂತೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು. ಇದು ಇಡೀ ರಾಜ್ಯದ ನುಡಿ ಹಬ್ಬ ಜಿಲ್ಲೆಯಾದ್ಯಂತ ಸಂಭ್ರಮ ಸಡಗರ ಇರುವಂತೆ ಎಲ್ಲಾ ವರ್ಗದವರನ್ನು ಸೇರಿಸಿ ಸಮ್ಮೇಳನ ಸಂಘಟಿಸಿ ಎಂದು ಕರೆ ನೀಡಿದರು.

ಶಾಸಕರಾದ ರಮೇಶ್ ಬಾಬು ಬಂಡಿ ಸಿದ್ದೇಗೌಡ, ಪಿ.ಎಂ ನರೇಂದ್ರ ಸ್ವಾಮಿ, ಉದಯ ಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾದ್ಯಕ್ಷ ನಾಡೋಜ ಮಹೇಶ್ ಜೋಷಿ, ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಅವರು ಸಮ್ಮೇಳನದ ಸಂಘಟನೆ ಕುರಿತು ಮಾಹಿತಿ ಹಾಗೂ ಅಭಿಪ್ರಾಯ, ಸಲಹೆಗಳನ್ನು ನೀಡಿದರು.

ಲಾಂಛನ ರಚಿಸಿದ ಕಲಾವಿದರ ಶಂಕರ್, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಡಾ. ಪಟೇಲ್ ಪಾಂಡು, ನೇ.ಭ ರಾಮಲಿಂಗ ಶೆಟ್ಟಿ, ಮೀರಾ ಶಿವಕುಮಾರ್, ಡಾ ಪದ್ಮಿನಿ ನಾಗರಾಜ್, ಎಂ.ಎಸ್. ಶ್ರೀನಿವಾಸ ಮೂರ್ತಿ ಸಭೆಯಲ್ಲಿ ಹಾಜರಿದ್ದರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago