ಮಂಡ್ಯ

ಮಂಡ್ಯ ಕೃಷಿ ವಿ.ವಿ ಆಡಳಿತಾತ್ಮಕ ವರ್ಗಾವಣೆಗೆ ಅಗತ್ಯ ಕ್ರಮವಹಿಸಿ: ಸಚಿವ ಎನ್. ಚಲುವರಾಯಸ್ವಾಮಿ.

ಬೆಂಗಳೂರು : ಜಿ.ಕೆ.ವಿ.ಕೆಯ ಆಡಳಿತ ವ್ಯವಸ್ಥೆ ಹಾಗೂ ಘನತೆಗೆ ಕುಂದು ಉಂಟಾಗದಂತೆ ಮಂಡ್ಯದ ವಿ.ಸ್.ಫಾರ್ಮ್ ನಲ್ಲಿ ನೂತನ ಪ್ರಾರಂಭಗೊಂಡಿರುವ ಕೃಷಿ ವಿ.ವಿ.ಗೆ ಅಗತ್ಯವಿರುವ ಸಿಬ್ಬಂದಿ ಹಾಗೂ ಇತರ ಸೌಕರ್ಯಗಳ ವರ್ಗಾವಣೆ ಮಾಡುವಂತೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿಯವರು ನಿರ್ದೇಶನ ನೀಡಿದ್ದಾರೆ.

ಬೆಂಗಳೂರಿನ ಮಹಾತ್ಮ ಗಾಂಧಿ ಕೃಷಿ ವಿಶ್ವವಿದ್ಯಾಲಯದಿಂದ ಬೇರ್ಪಟ್ಟಿರುವ ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಆಡಳಿತ ಚಟುವಟಿಕೆಗೆ ಅಗತ್ಯವಿರುವ ಮೂಲಭೂತ ಸೌಕರ್ಯ ಒದಗಿಸುವ ಕುರಿತು ಸಭೆ ನಡೆಸಿದ ಸಚಿವರು ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇರುವ ಜಿ.ಕೆ.ವಿ.ಕೆ ಮತ್ತು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಬೇರ್ಪಡಿಸಲಾಗಿರುವ ಕೃಷಿ, ತೋಟಗಾರಿಕೆ ಮತ್ತು ಅರಣ್ಯ ಕಾಲೇಜುಗಳು/ಸಂಶೋಧನಾ ಕೇಂದ್ರಗಳ ಕಟ್ಟಡ ಹಾಗೂ ಬೋಧಕ/ಬೋದಕೇತರ ಸಿಬ್ಬಂದಿಯೊಂದಿಗೆ ಮಂಡ್ಯ ಕೃಷಿ ವಿ.ವಿ.ಗೆ ನಿಯಮಾನುಸಾರ ವರ್ಗಾಯಿಸುವಂತೆ ಸಚಿವರು ತಿಳಿಸಿದರು..

ಮಂಡ್ಯ ಕೃಷಿ ವಿ.ವಿ, ಕನಸಿನ ಕೂಸಾಗಿದ್ದು ಇದ್ದನ್ನು ಸಹ ಇತರ ಕೃಷಿ ವಿಶ್ವವಿದ್ಯಾಲಯಗಳಷ್ಟೆ ಮೌಲ್ಯಯುತವಾಗಿ, ಆಡಳಿತಾತ್ಮಕವಾಗಿ, ಶೈಕ್ಷಣಿಕವಾಗಿ ಬಲವರ್ಧನೆಗೊಳಿಸಲು ಎರಡು ವಿಶ್ವವಿದ್ಯಾಲಯದ ಅಧಿಕಾರಿಗಳು ಶ್ರಮಿಸಬೇಕಿದೆ ಎಂದು ಕರೆ ನೀಡಿದರು..

ಜಿ.ಕೆ.ವಿ.ಕೆ ಅತ್ಯಂತ ಹಳೆಯ ಕೃಷಿ ವಿಶ್ವವಿದ್ಯಾಲಯವಾಗಿದ್ದು ವ್ಯವಸ್ಥಿತವಾಗಿ ಪ್ರಗತಿ ಕಂಡಿದೆ. ಅಲ್ಲದೇ ರಾಷ್ಟ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲೂ ಹೆಸರು ಮಾಡಿದೆ. ಅದರ ಮೌಲ್ಯ, ಬೆಳವಣಿಗೆ ಹಾಗೂ ಮಹತ್ವಕ್ಕೆ ಒಂದಿಷ್ಟು ದಕ್ಕೆಯಾಗದಂತೆ ಆಡಳಿತಾತ್ಮಕ ವಿಭಜನೆ ಕೈಗೊಳ್ಳುವಂತೆ ಅವರು ಸೂಚಿಸಿದರು.

ಹೊಸದಾಗಿ ಸೃಜನೆಯಾಗಬೇಕಾಗಿರುವ ಹುದ್ದೆಗಳನ್ನ ಪಟ್ಟಿ ಮಾಡಿ ಹಣಕಾಸು ಇಲಾಖೆಗೆ ಅನುಮೋದನೆಗೆ ಕಳುಹಿಸಿಕೊಡುವಂತೆ ಸೂಚಿಸಿದ ಸಚಿವ ಎನ್.ಚಲುವರಾಯಸ್ವಾಮಿಯವರು, ಒಟ್ಟಾರೆ ರಾಜ್ಯದ ಕೃಷಿ ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಣೆಗೆ ಮೊದಲ ಆದ್ಯತೆ ನೀಡುವಂತೆ ಹೇಳಿದರು.

ಮಂಡ್ಯ ಕೃಷಿ ವಿ.ವಿ ಸದೃಡ ಆಗುವವರೆಗೆ, ವಿದ್ಯಾರ್ಥಿಗಳ ನೋಂದಣಿ ಪರೀಕ್ಷೆ ಸಿದ್ದತೆ, ಫಲಿತಾಂಶ ಮತ್ತಿತರ ವಿಚಾರಗಳ ಬಗ್ಗೆ ನಿರಂತರವಾಗಿ ಅಗತ್ಯ ಸಹಕಾರ ಮತ್ತು ಮಾರ್ಗದರ್ಶನ ನೀಡುವಂತೆ ಜಿ.ಕೆ.ವಿ.ಕೆ ಅಧಿಕಾರಿಗಳಿಗೆ ಸೂಚಿಸಿದರು.

ಜಿ.ಕೆ.ವಿ.ಕೆ ಉಪ ಕುಲಪತಿ ಡಾ. ಸುರೇಶ್, ಶಿವಮೊಗ್ಗ ಕೃಷಿ ವಿ.ವಿ. ಉಪ ಕುಲಪತಿ ಡಾ ಜಗದೀಶ್ ,ಕೃಷಿ ಆಯುಕ್ತರಾದ ವೈ.ಎಸ್. ಪಾಟೀಲ್, ಕೃಷಿ ನಿರ್ದೇಶಕರಾದ ಡಾ. ಜಿ.ಟಿ. ಪುತ್ರ. ಅಪರ ಕೃಷಿ ನಿರ್ದೇಶಕರಾದ ವೆಂಕಟರಮಣರೆಡ್ಡಿ, ಮಂಡ್ಯ ಕೃಷಿ ವಿ.ವಿ. ವಿಶೇಷಾಧಿಕಾರಿ ಡಾ. ಹರಿಣಿಕುಮಾರ, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

3 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

3 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

3 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

3 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

3 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

3 hours ago