Categories: ಮಂಡ್ಯ

ದೇವಾಲಯದ ಗೇಟ್‌ ಕುಸಿದ ಮಗು ಸಾವು: ಕ್ರಮಕ್ಕೆ ಪೋಷಕರ ಆಗ್ರಹ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಂಜನಗೆರೆ ಗ್ರಾಮದಲ್ಲಿನ ಚನ್ನಕೇಶ್ವರ ದೇವಾಲಯಕ್ಕೆ ಪೂಜೆಗೆಂದು ತೆರಳಿದಾಗ ಶಿಥಿಲಾವಸ್ಥೆಯಲ್ಲಿದ್ದ ಗೇಟ್ ಕುಸಿದು, ನನ್ನ ಪುತ್ರ ಐದು ವರ್ಷದ ಜಿಷ್ಣು ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಘಟನೆಗೆ ಕಾರಣವಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮೃತ ಮಗುವಿನ ತಂದೆ ಸಿದ್ದರಾಜು ಹೆಚ್.ಜೆ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆ ನಡೆದು ಮಗುವಿನ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಅಥವಾ ತದನಂತರವಾದರೂ ಜಿಲ್ಲಾಡಳಿತ, ತಾಲೂಕು ಆಡಳಿತ ಅಥವಾ ಶಾಸಕರು ಸೇರಿದಂತೆ ಮತ್ತಾವ ಜನಪ್ರತಿನಿಧಿಯೂ ನನ್ನ ಕುಟುಂಬಕ್ಕೆ ಸಾಂತ್ವನ ಹೇಳಲು ಸಹ ಮುಂದಾಗಿಲ್ಲ ಎಂದು ಅಳಲು ತೋಡಿಕೊಂಡರು.

೧೪೮ ಕೆ.ಜಿ ತೂಕದ ಗೇಟ್ ಮುಗುವಿನ ಮೇಲೆ ಬಿದ್ದದ್ದರಿಂದ ತಲೆಗೆ ಪೆಟ್ಟುಬಿದ್ದು, ರಕ್ತದ ನಡುವೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗನನ್ನು ಆಸ್ಪತ್ರೆಗೆ ಸೇರಿಸಿದಾಗ ವೈದ್ಯರು ಮಗು ಮೃತವಾಗಿರುವುದನ್ನು ದೃಢ ಪಡಿಸಿದರು. ಶವಾಗಾರಕ್ಕೆ ತಹಸೀಲ್ದಾರ್ ಭೇಟಿ ನೀಡಿ, ಈ ಸಂಬಂಧ ನೋಡುವುದಾಗಿ ಹೇಳಿದ್ದು, ಬಿಟ್ಟರೆ ೧೦ ದಿನ ಕಳೆದರೂ ಯಾವುದೇ ಕ್ರಮ ಕೈಗೊಳ್ಳುವುದಿರಲಿ, ಸಾಂತ್ವನ ಹೇಳಲೂ ಸಹ ಮುಂದಾಗಿಲ್ಲ ಎಂದು ಕಣ್ಣೀರಿಟ್ಟರು.

ದೂರು ದಾಖಲಾಗಿದ್ದರೂ ಪೊಲೀಸರು ಸಹ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ, ಬಡವರೆಂದು ಅಸಡ್ಡೆ ತೋರಿದ್ದಾರೆ. ಸದರಿ ಘಟನೆಗೆ ಕಾರಣರಾದವರಿಗೆ ಶಿಕ್ಷೆಯಾಗಿ ನ್ಯಾಯ ದೊರಕುವಂತಾಗಬೇಕು. ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಘಟನೆ ನಡೆಯದಂತೆ ಕ್ರಮ ವಹಿಸುವಂತಾಗಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಮಗುವಿನ ತಾಯಿ ಸುಮಿತ್ರ, ಗ್ರಾಮದ ಸಾಗರ್, ಹರೀಶ್‌ಕುಮಾರ್, ಸಾಕಮ್ಮ, ಸಿ.ಚನ್ನಯ್ಯ ಇದ್ದರು.

ಸಾಂತ್ವನ ಹೇಳಿದ ಸಚ್ಚಿದಾನಂದ
ಸದರಿ ಘಟನೆಯ ಸಂಬಂಧ ಪತ್ರಕರ್ತರ ಭವನದ ಬಳಿಗೆ ಆಗಮಿಸಿದ ಬಿಜೆಪಿ ಮುಖಂಡ ಸಚ್ಚಿದಾನಂದ ಅವರು ಪ್ರಕರಣದ ಸಂಬಂಧ ಮಾಹಿತಿ ಪಡೆದು, ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಘಟನೆ ನಡೆದು ಹತ್ತು ದಿನ ಕಳೆದರೂ ಜಿಲ್ಲಾಡಳಿತ, ತಾಲೂಕು ಆಡಳಿತ ಅಥವಾ ಸ್ಥಳೀಯ ಶಾಸಕರು ಭೇಟಿ ನೀಡಿ ಕನಿಷ್ಠ ಸಾಂತ್ವನ ಹೇಳದಿರುವುದು. ಶ್ರೀರಂಗಪಟ್ಟಣ ತಾಲೂಕಿನಲ್ಲಿ ಶಾಸಕ ತುಘಲಕ್ ಸರ್ಕಾರ ನಡೆಸುತ್ತಿರುವುದು ಹಾಗೂ ಅವರ ದುರ್ನಡತೆಗೆ ಹಿಡಿದ ಕೈಗನ್ನಡಿಯಾಗಿದೆ.
ಈ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು ಆಗ್ರಹಿಸಿದರು.

ಸ್ಥಳದಲ್ಲೇ ವೈಯಕ್ತಿಕ ಪರಿಹಾರ ನೀಡಿದ ಸಚ್ಚಿದಾನಂದ ಅವರು, ಸಿದ್ದರಾಜು ಅವರ ಮತ್ತೊಂದು ಮಗುವಿನ ಮುಂದಿನ ವಿದ್ಯಾಭ್ಯಾಸದ ದೃಷ್ಠಿಯಿಂದ ೨ ಲಕ್ಷ ರೂ ಠೇವಣಿ ಇಡುವ ಕೆಲಸ ಮಾಡುವುದಾಗಿ ಘೋಷಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…

5 mins ago

ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್‌ ಸಿಂಗ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…

10 mins ago

ಮನರೇಗಾ ಮರು ಜಾರಿ ಮಾಡುವವರೆಗೆ ಹೋರಾಟದಿಂದ ಹಿಂದೆ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…

13 mins ago

ಮಂಡ್ಯ| ಜೂಜಾಟದಲ್ಲಿ ತೊಡಗಿದ್ದ 29 ಮಂದಿ ಬಂಧನ: 10 ಲಕ್ಷ ರೂ. ವಶ

ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…

22 mins ago

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

1 hour ago

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…

1 hour ago