Categories: ಮಂಡ್ಯ

ದೇವಾಲಯದ ಗೇಟ್‌ ಕುಸಿದ ಮಗು ಸಾವು: ಕ್ರಮಕ್ಕೆ ಪೋಷಕರ ಆಗ್ರಹ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಂಜನಗೆರೆ ಗ್ರಾಮದಲ್ಲಿನ ಚನ್ನಕೇಶ್ವರ ದೇವಾಲಯಕ್ಕೆ ಪೂಜೆಗೆಂದು ತೆರಳಿದಾಗ ಶಿಥಿಲಾವಸ್ಥೆಯಲ್ಲಿದ್ದ ಗೇಟ್ ಕುಸಿದು, ನನ್ನ ಪುತ್ರ ಐದು ವರ್ಷದ ಜಿಷ್ಣು ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಘಟನೆಗೆ ಕಾರಣವಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮೃತ ಮಗುವಿನ ತಂದೆ ಸಿದ್ದರಾಜು ಹೆಚ್.ಜೆ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆ ನಡೆದು ಮಗುವಿನ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಅಥವಾ ತದನಂತರವಾದರೂ ಜಿಲ್ಲಾಡಳಿತ, ತಾಲೂಕು ಆಡಳಿತ ಅಥವಾ ಶಾಸಕರು ಸೇರಿದಂತೆ ಮತ್ತಾವ ಜನಪ್ರತಿನಿಧಿಯೂ ನನ್ನ ಕುಟುಂಬಕ್ಕೆ ಸಾಂತ್ವನ ಹೇಳಲು ಸಹ ಮುಂದಾಗಿಲ್ಲ ಎಂದು ಅಳಲು ತೋಡಿಕೊಂಡರು.

೧೪೮ ಕೆ.ಜಿ ತೂಕದ ಗೇಟ್ ಮುಗುವಿನ ಮೇಲೆ ಬಿದ್ದದ್ದರಿಂದ ತಲೆಗೆ ಪೆಟ್ಟುಬಿದ್ದು, ರಕ್ತದ ನಡುವೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗನನ್ನು ಆಸ್ಪತ್ರೆಗೆ ಸೇರಿಸಿದಾಗ ವೈದ್ಯರು ಮಗು ಮೃತವಾಗಿರುವುದನ್ನು ದೃಢ ಪಡಿಸಿದರು. ಶವಾಗಾರಕ್ಕೆ ತಹಸೀಲ್ದಾರ್ ಭೇಟಿ ನೀಡಿ, ಈ ಸಂಬಂಧ ನೋಡುವುದಾಗಿ ಹೇಳಿದ್ದು, ಬಿಟ್ಟರೆ ೧೦ ದಿನ ಕಳೆದರೂ ಯಾವುದೇ ಕ್ರಮ ಕೈಗೊಳ್ಳುವುದಿರಲಿ, ಸಾಂತ್ವನ ಹೇಳಲೂ ಸಹ ಮುಂದಾಗಿಲ್ಲ ಎಂದು ಕಣ್ಣೀರಿಟ್ಟರು.

ದೂರು ದಾಖಲಾಗಿದ್ದರೂ ಪೊಲೀಸರು ಸಹ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ, ಬಡವರೆಂದು ಅಸಡ್ಡೆ ತೋರಿದ್ದಾರೆ. ಸದರಿ ಘಟನೆಗೆ ಕಾರಣರಾದವರಿಗೆ ಶಿಕ್ಷೆಯಾಗಿ ನ್ಯಾಯ ದೊರಕುವಂತಾಗಬೇಕು. ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಘಟನೆ ನಡೆಯದಂತೆ ಕ್ರಮ ವಹಿಸುವಂತಾಗಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಮಗುವಿನ ತಾಯಿ ಸುಮಿತ್ರ, ಗ್ರಾಮದ ಸಾಗರ್, ಹರೀಶ್‌ಕುಮಾರ್, ಸಾಕಮ್ಮ, ಸಿ.ಚನ್ನಯ್ಯ ಇದ್ದರು.

ಸಾಂತ್ವನ ಹೇಳಿದ ಸಚ್ಚಿದಾನಂದ
ಸದರಿ ಘಟನೆಯ ಸಂಬಂಧ ಪತ್ರಕರ್ತರ ಭವನದ ಬಳಿಗೆ ಆಗಮಿಸಿದ ಬಿಜೆಪಿ ಮುಖಂಡ ಸಚ್ಚಿದಾನಂದ ಅವರು ಪ್ರಕರಣದ ಸಂಬಂಧ ಮಾಹಿತಿ ಪಡೆದು, ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಘಟನೆ ನಡೆದು ಹತ್ತು ದಿನ ಕಳೆದರೂ ಜಿಲ್ಲಾಡಳಿತ, ತಾಲೂಕು ಆಡಳಿತ ಅಥವಾ ಸ್ಥಳೀಯ ಶಾಸಕರು ಭೇಟಿ ನೀಡಿ ಕನಿಷ್ಠ ಸಾಂತ್ವನ ಹೇಳದಿರುವುದು. ಶ್ರೀರಂಗಪಟ್ಟಣ ತಾಲೂಕಿನಲ್ಲಿ ಶಾಸಕ ತುಘಲಕ್ ಸರ್ಕಾರ ನಡೆಸುತ್ತಿರುವುದು ಹಾಗೂ ಅವರ ದುರ್ನಡತೆಗೆ ಹಿಡಿದ ಕೈಗನ್ನಡಿಯಾಗಿದೆ.
ಈ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು ಆಗ್ರಹಿಸಿದರು.

ಸ್ಥಳದಲ್ಲೇ ವೈಯಕ್ತಿಕ ಪರಿಹಾರ ನೀಡಿದ ಸಚ್ಚಿದಾನಂದ ಅವರು, ಸಿದ್ದರಾಜು ಅವರ ಮತ್ತೊಂದು ಮಗುವಿನ ಮುಂದಿನ ವಿದ್ಯಾಭ್ಯಾಸದ ದೃಷ್ಠಿಯಿಂದ ೨ ಲಕ್ಷ ರೂ ಠೇವಣಿ ಇಡುವ ಕೆಲಸ ಮಾಡುವುದಾಗಿ ಘೋಷಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

8 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

8 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

9 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

9 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

10 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

10 hours ago