Categories: ಮಂಡ್ಯ

ದೇವಾಲಯದ ಗೇಟ್‌ ಕುಸಿದ ಮಗು ಸಾವು: ಕ್ರಮಕ್ಕೆ ಪೋಷಕರ ಆಗ್ರಹ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಂಜನಗೆರೆ ಗ್ರಾಮದಲ್ಲಿನ ಚನ್ನಕೇಶ್ವರ ದೇವಾಲಯಕ್ಕೆ ಪೂಜೆಗೆಂದು ತೆರಳಿದಾಗ ಶಿಥಿಲಾವಸ್ಥೆಯಲ್ಲಿದ್ದ ಗೇಟ್ ಕುಸಿದು, ನನ್ನ ಪುತ್ರ ಐದು ವರ್ಷದ ಜಿಷ್ಣು ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಘಟನೆಗೆ ಕಾರಣವಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮೃತ ಮಗುವಿನ ತಂದೆ ಸಿದ್ದರಾಜು ಹೆಚ್.ಜೆ ಒತ್ತಾಯಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆ ನಡೆದು ಮಗುವಿನ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಅಥವಾ ತದನಂತರವಾದರೂ ಜಿಲ್ಲಾಡಳಿತ, ತಾಲೂಕು ಆಡಳಿತ ಅಥವಾ ಶಾಸಕರು ಸೇರಿದಂತೆ ಮತ್ತಾವ ಜನಪ್ರತಿನಿಧಿಯೂ ನನ್ನ ಕುಟುಂಬಕ್ಕೆ ಸಾಂತ್ವನ ಹೇಳಲು ಸಹ ಮುಂದಾಗಿಲ್ಲ ಎಂದು ಅಳಲು ತೋಡಿಕೊಂಡರು.

೧೪೮ ಕೆ.ಜಿ ತೂಕದ ಗೇಟ್ ಮುಗುವಿನ ಮೇಲೆ ಬಿದ್ದದ್ದರಿಂದ ತಲೆಗೆ ಪೆಟ್ಟುಬಿದ್ದು, ರಕ್ತದ ನಡುವೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗನನ್ನು ಆಸ್ಪತ್ರೆಗೆ ಸೇರಿಸಿದಾಗ ವೈದ್ಯರು ಮಗು ಮೃತವಾಗಿರುವುದನ್ನು ದೃಢ ಪಡಿಸಿದರು. ಶವಾಗಾರಕ್ಕೆ ತಹಸೀಲ್ದಾರ್ ಭೇಟಿ ನೀಡಿ, ಈ ಸಂಬಂಧ ನೋಡುವುದಾಗಿ ಹೇಳಿದ್ದು, ಬಿಟ್ಟರೆ ೧೦ ದಿನ ಕಳೆದರೂ ಯಾವುದೇ ಕ್ರಮ ಕೈಗೊಳ್ಳುವುದಿರಲಿ, ಸಾಂತ್ವನ ಹೇಳಲೂ ಸಹ ಮುಂದಾಗಿಲ್ಲ ಎಂದು ಕಣ್ಣೀರಿಟ್ಟರು.

ದೂರು ದಾಖಲಾಗಿದ್ದರೂ ಪೊಲೀಸರು ಸಹ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ, ಬಡವರೆಂದು ಅಸಡ್ಡೆ ತೋರಿದ್ದಾರೆ. ಸದರಿ ಘಟನೆಗೆ ಕಾರಣರಾದವರಿಗೆ ಶಿಕ್ಷೆಯಾಗಿ ನ್ಯಾಯ ದೊರಕುವಂತಾಗಬೇಕು. ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಘಟನೆ ನಡೆಯದಂತೆ ಕ್ರಮ ವಹಿಸುವಂತಾಗಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಮಗುವಿನ ತಾಯಿ ಸುಮಿತ್ರ, ಗ್ರಾಮದ ಸಾಗರ್, ಹರೀಶ್‌ಕುಮಾರ್, ಸಾಕಮ್ಮ, ಸಿ.ಚನ್ನಯ್ಯ ಇದ್ದರು.

ಸಾಂತ್ವನ ಹೇಳಿದ ಸಚ್ಚಿದಾನಂದ
ಸದರಿ ಘಟನೆಯ ಸಂಬಂಧ ಪತ್ರಕರ್ತರ ಭವನದ ಬಳಿಗೆ ಆಗಮಿಸಿದ ಬಿಜೆಪಿ ಮುಖಂಡ ಸಚ್ಚಿದಾನಂದ ಅವರು ಪ್ರಕರಣದ ಸಂಬಂಧ ಮಾಹಿತಿ ಪಡೆದು, ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಘಟನೆ ನಡೆದು ಹತ್ತು ದಿನ ಕಳೆದರೂ ಜಿಲ್ಲಾಡಳಿತ, ತಾಲೂಕು ಆಡಳಿತ ಅಥವಾ ಸ್ಥಳೀಯ ಶಾಸಕರು ಭೇಟಿ ನೀಡಿ ಕನಿಷ್ಠ ಸಾಂತ್ವನ ಹೇಳದಿರುವುದು. ಶ್ರೀರಂಗಪಟ್ಟಣ ತಾಲೂಕಿನಲ್ಲಿ ಶಾಸಕ ತುಘಲಕ್ ಸರ್ಕಾರ ನಡೆಸುತ್ತಿರುವುದು ಹಾಗೂ ಅವರ ದುರ್ನಡತೆಗೆ ಹಿಡಿದ ಕೈಗನ್ನಡಿಯಾಗಿದೆ.
ಈ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು ಆಗ್ರಹಿಸಿದರು.

ಸ್ಥಳದಲ್ಲೇ ವೈಯಕ್ತಿಕ ಪರಿಹಾರ ನೀಡಿದ ಸಚ್ಚಿದಾನಂದ ಅವರು, ಸಿದ್ದರಾಜು ಅವರ ಮತ್ತೊಂದು ಮಗುವಿನ ಮುಂದಿನ ವಿದ್ಯಾಭ್ಯಾಸದ ದೃಷ್ಠಿಯಿಂದ ೨ ಲಕ್ಷ ರೂ ಠೇವಣಿ ಇಡುವ ಕೆಲಸ ಮಾಡುವುದಾಗಿ ಘೋಷಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಗಳೂರು ಬಂದರಿಗೆ ಬಂದ ಎಲ್‌ಪಿಜಿ ಹೊತ್ತ ಎರಡು ಹಡಗು

ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…

7 mins ago

ನಮ್ಮ ವೈರಿಗಳಿಗೆ ಮಾತ್ರ ಹೊರ್ಮುಜ್‌ ಮುಚ್ಚಿದೆ : ಇರಾನ್‌

ವಿಶ್ವಸಂಸ್ಥೆ : ಇರಾನ್‌ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್‌ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…

1 hour ago

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…

2 hours ago

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

2 hours ago

ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…

2 hours ago

ನಿಮ್ಮ ಸುಪ್ರೀಂ ಲೀಡರ್‌ ಬದುಕಿದ್ದಾರಾ?: ಅಮೇರಿಕಾ ಪ್ರಶ್ನೆ

ವಾಷಿಂಗ್ಟನ್:‌ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್‌ನ ನೂತನ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.…

3 hours ago