ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಂಜನಗೆರೆ ಗ್ರಾಮದಲ್ಲಿನ ಚನ್ನಕೇಶ್ವರ ದೇವಾಲಯಕ್ಕೆ ಪೂಜೆಗೆಂದು ತೆರಳಿದಾಗ ಶಿಥಿಲಾವಸ್ಥೆಯಲ್ಲಿದ್ದ ಗೇಟ್ ಕುಸಿದು, ನನ್ನ ಪುತ್ರ ಐದು ವರ್ಷದ ಜಿಷ್ಣು ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಘಟನೆಗೆ ಕಾರಣವಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮೃತ ಮಗುವಿನ ತಂದೆ ಸಿದ್ದರಾಜು ಹೆಚ್.ಜೆ ಒತ್ತಾಯಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆ ನಡೆದು ಮಗುವಿನ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಅಥವಾ ತದನಂತರವಾದರೂ ಜಿಲ್ಲಾಡಳಿತ, ತಾಲೂಕು ಆಡಳಿತ ಅಥವಾ ಶಾಸಕರು ಸೇರಿದಂತೆ ಮತ್ತಾವ ಜನಪ್ರತಿನಿಧಿಯೂ ನನ್ನ ಕುಟುಂಬಕ್ಕೆ ಸಾಂತ್ವನ ಹೇಳಲು ಸಹ ಮುಂದಾಗಿಲ್ಲ ಎಂದು ಅಳಲು ತೋಡಿಕೊಂಡರು.
೧೪೮ ಕೆ.ಜಿ ತೂಕದ ಗೇಟ್ ಮುಗುವಿನ ಮೇಲೆ ಬಿದ್ದದ್ದರಿಂದ ತಲೆಗೆ ಪೆಟ್ಟುಬಿದ್ದು, ರಕ್ತದ ನಡುವೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗನನ್ನು ಆಸ್ಪತ್ರೆಗೆ ಸೇರಿಸಿದಾಗ ವೈದ್ಯರು ಮಗು ಮೃತವಾಗಿರುವುದನ್ನು ದೃಢ ಪಡಿಸಿದರು. ಶವಾಗಾರಕ್ಕೆ ತಹಸೀಲ್ದಾರ್ ಭೇಟಿ ನೀಡಿ, ಈ ಸಂಬಂಧ ನೋಡುವುದಾಗಿ ಹೇಳಿದ್ದು, ಬಿಟ್ಟರೆ ೧೦ ದಿನ ಕಳೆದರೂ ಯಾವುದೇ ಕ್ರಮ ಕೈಗೊಳ್ಳುವುದಿರಲಿ, ಸಾಂತ್ವನ ಹೇಳಲೂ ಸಹ ಮುಂದಾಗಿಲ್ಲ ಎಂದು ಕಣ್ಣೀರಿಟ್ಟರು.
ದೂರು ದಾಖಲಾಗಿದ್ದರೂ ಪೊಲೀಸರು ಸಹ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ, ಬಡವರೆಂದು ಅಸಡ್ಡೆ ತೋರಿದ್ದಾರೆ. ಸದರಿ ಘಟನೆಗೆ ಕಾರಣರಾದವರಿಗೆ ಶಿಕ್ಷೆಯಾಗಿ ನ್ಯಾಯ ದೊರಕುವಂತಾಗಬೇಕು. ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಘಟನೆ ನಡೆಯದಂತೆ ಕ್ರಮ ವಹಿಸುವಂತಾಗಬೇಕು ಎಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಮಗುವಿನ ತಾಯಿ ಸುಮಿತ್ರ, ಗ್ರಾಮದ ಸಾಗರ್, ಹರೀಶ್ಕುಮಾರ್, ಸಾಕಮ್ಮ, ಸಿ.ಚನ್ನಯ್ಯ ಇದ್ದರು.
ಸಾಂತ್ವನ ಹೇಳಿದ ಸಚ್ಚಿದಾನಂದ
ಸದರಿ ಘಟನೆಯ ಸಂಬಂಧ ಪತ್ರಕರ್ತರ ಭವನದ ಬಳಿಗೆ ಆಗಮಿಸಿದ ಬಿಜೆಪಿ ಮುಖಂಡ ಸಚ್ಚಿದಾನಂದ ಅವರು ಪ್ರಕರಣದ ಸಂಬಂಧ ಮಾಹಿತಿ ಪಡೆದು, ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಘಟನೆ ನಡೆದು ಹತ್ತು ದಿನ ಕಳೆದರೂ ಜಿಲ್ಲಾಡಳಿತ, ತಾಲೂಕು ಆಡಳಿತ ಅಥವಾ ಸ್ಥಳೀಯ ಶಾಸಕರು ಭೇಟಿ ನೀಡಿ ಕನಿಷ್ಠ ಸಾಂತ್ವನ ಹೇಳದಿರುವುದು. ಶ್ರೀರಂಗಪಟ್ಟಣ ತಾಲೂಕಿನಲ್ಲಿ ಶಾಸಕ ತುಘಲಕ್ ಸರ್ಕಾರ ನಡೆಸುತ್ತಿರುವುದು ಹಾಗೂ ಅವರ ದುರ್ನಡತೆಗೆ ಹಿಡಿದ ಕೈಗನ್ನಡಿಯಾಗಿದೆ.
ಈ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು ಆಗ್ರಹಿಸಿದರು.
ಸ್ಥಳದಲ್ಲೇ ವೈಯಕ್ತಿಕ ಪರಿಹಾರ ನೀಡಿದ ಸಚ್ಚಿದಾನಂದ ಅವರು, ಸಿದ್ದರಾಜು ಅವರ ಮತ್ತೊಂದು ಮಗುವಿನ ಮುಂದಿನ ವಿದ್ಯಾಭ್ಯಾಸದ ದೃಷ್ಠಿಯಿಂದ ೨ ಲಕ್ಷ ರೂ ಠೇವಣಿ ಇಡುವ ಕೆಲಸ ಮಾಡುವುದಾಗಿ ಘೋಷಿಸಿದರು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…