ಮಂಡ್ಯ

ಜನವರಿಯಲ್ಲಿ ಕಾರ್ಮಿಕರ ಮಕ್ಕಳಿಗೆ ಕಿಟ್ ಸೌಲಭ್ಯ : ಸಚಿವ ಸಂತೋಷ್‌ಲಾಡ್ ಭರವಸೆ

ಮದ್ದೂರು : ತಾಲ್ಲೂಕಿನಲ್ಲಿ ವಸತಿ ಶಾಲೆ, ಕಾರ್ಮಿಕರ ಭವನ ಹಾಗೂ ಕಾರ್ಮಿಕರ ಮಕ್ಕಳಿಗೆ ಕಿಟ್ ಸೌಲಭ್ಯ ಕಲ್ಪಿಸಲು ಸ್ಥಳೀಯ ಶಾಸಕ ಕೆ.ಎಂ.ಉದಯ ಮನವಿ ಮಾಡಿದ್ದು, ಜನವರಿ ಮಾಹೆಯಲ್ಲಿ ಅಗತ್ಯ ಸೌಲಭ್ಯ ಕಲ್ಪಿಸುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದರು.

ತಾಲ್ಲೂಕಿನ ಕದಲೂರು ಗ್ರಾಮದ ಶಾಸಕ ಕೆ.ಎಂ.ಉದಯ ಅವರ ನಿವಾಸದಲ್ಲಿ ಶಾಸಕರಿಂದ ಮತ್ತು ಸ್ಥಳೀಯ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆ ವತಿಯಿಂದ ಮೂರು ಯೋಜನೆಗಳನ್ನು ಜಾರಿಗೊಳಿಸಲು ಅಗತ್ಯ ಕ್ರಮ ವಹಿಸಿದ್ದು, ಜನವರಿ ಅಥವಾ ಫೆಬ್ರವರಿ ಅಂತ್ಯದಲ್ಲಿ ಕಾರ್ಮಿಕ ಭವನ, ವಸತಿ ಶಾಲೆ ಮತ್ತು ಕಾರ್ಮಿಕ ಕಿಟ್ ವಿತರಿಸಲು ಕ್ರಮ ವಹಿಸಲಾಗುವುದೆಂದರು.

ಅದರಲ್ಲೂ ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕೆಂಬ ಉದ್ದೇಶ ಹೊಂದಿದ್ದು, ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ವಿತರಿಸುವ ಜತೆಗೆ ಮೂರು ಅಂಶಗಳನ್ನು ತ್ವರಿತ ಗತಿಯಲ್ಲಿ ಪೂರೈಸಲು ಇಲಾಖೆ ಮುಂದಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳ ಅವಧಿಯಲ್ಲಿ ಕಾರ್ಮಿಕರಿಗೆ ೫೫ ಕೋಟಿ ರೂ.ಗಳನ್ನು ವಿತರಿಸಿದೆ. ಜತೆಗೆ ೧೩ ಲಕ್ಷ ಮಕ್ಕಳಿಗೆ ಅಗತ್ಯ ಸೌಲಭ್ಯವನ್ನು ಒಂದೇ ಅವಧಿಯಲ್ಲಿ ಪೂರೈಕೆ ಮಾಡಲಾಗಿದೆ. ಸೌಲಭ್ಯ ವಂಚಿತ ಕಾರ್ಮಿಕರ ಬಗ್ಗೆ ಮಾಹಿತಿಯಿದ್ದಲ್ಲಿ ಅದನ್ನು ಸರಿಪಡಿಸಿ ಅಗತ್ಯ ಯೋಜನೆಯನ್ನು ರೂಪಿಸಲು ಕ್ರಮ ವಹಿಸಲಾಗುವುದೆಂದರು.

ಇದನ್ನೂ ಓದಿ:-ಹುಲಿ ದಾಳಿಗೆ ಹಸು ಸಾವು, ಮತ್ತೊಂದು ಗಂಭೀರ

ಕಾಂಗ್ರೆಸ್ ಸರ್ಕಾರ ಅಽಕಾರಕ್ಕೆ ಬಂದ ಮೇಲೆ ಕಾರ್ಮಿಕರ ಆರ್ಥಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡಿ ಹತ್ತು ಹಲವು ಸೌಲಭ್ಯಗಳನ್ನು ಒದಗಿಸುವ ಮೂಲಕ ಹಿಂದುಳಿದಿರುವ ಕಾರ್ಮಿಕರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಯಾವುದೇ ಸರ್ಕಾರಗಳು ಒಂದೇ ಅವಧಿಯಲ್ಲಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಹಂತ ಹಂತವಾಗಿ ಸೌಲಭ್ಯ ಕಲ್ಪಿಸಲು ಮುಂದಾಗುವುದಾಗಿ ತಿಳಿಸಿದರು.

ಶಾಸಕ ಕೆ.ಎಂ.ಉದಯ ಮಾತನಾಡಿ, ಕೇಂದ್ರ ಸರ್ಕಾರ ಇವಿಎಂ ಅನ್ನು ದುರುಪಯೋಗ ಪಡಿಸಿಕೊಂಡು ಆಡಳಿತ ನಡೆಸುತ್ತಿದೆ. ಈಗಾಗಲೇ ರಾಹುಲ್‌ಗಾಂಽಯವರು ಬೇರೆ ಬೇರೆ ರಾಜ್ಯಗಳಲ್ಲಿ ನಡೆದಿರುವ ಮತಚೋರಿ ಪ್ರಕರಣಗಳನ್ನು ದಾಖಲೆ ಸಮೇತ ಬಿಡುಗಡೆ ಮಾಡಿದ್ದು, ಈ ಸಂಬಂಧ ನಾವು ಮದ್ದೂರು ಕ್ಷೇತ್ರದಲ್ಲಿ ಸಹಿ ಸಂಗ್ರಹ ಅಭಿಯಾನ ಕೈಗೊಂಡಿರುವುದಾಗಿ ಹೇಳಿದರು.

ಈಗಾಗಲೇ ಹಲವು ರಾಜ್ಯಗಳಲ್ಲಿ ಮತಚೋರಿ ನಡೆದಿರುವ ಬಗ್ಗೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಽಯವರು ದಾಖಲಾತಿ ಸಮೇತ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲೂ ಪಕ್ಷವು ನಿರಂತರ ಹೋರಾಟ ರೂಪಿಸುವುದಾಗಿ ತಿಳಿಸಿದರು.

ದೆಹಲಿಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ. ಈ ಸಂಬಂಧ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಚಲುವರಾಜು, ಪಿ.ಸಂದರ್ಶ, ಕದಲೂರು ಗ್ರಾ.ಪಂ. ಅಧ್ಯಕ್ಷ ತಿಮ್ಮೇಗೌಡ, ಮುಖಂಡರಾದ ರಾಮಕೃಷ್ಣ, ಶಿವಲಿಂಗಯ್ಯ ಇತರರಿದ್ದರು.

ಆಂದೋಲನ ಡೆಸ್ಕ್

Recent Posts

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

2 hours ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

2 hours ago

ಮಾಂಸಾಹಾರ ಬಿಟ್ಟರೂ ಮಿತ್ರನ ಗೆಳೆತನ ಬಿಡಲಾಗಲಿಲ್ಲ

ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…

2 hours ago

ಡಿಕೆಶಿ ಸಂಪುಟದಲ್ಲಿ ಯಾರ‍್ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ?

ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್‌ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…

2 hours ago

ಈ ಬಾರಿ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

2 hours ago

ಕಂದಾಯ ದಾಖಲೆಯಲ್ಲಿ ೪ ವಾರ್ಡ್‌ಗಳೇ ನಾಪತ್ತೆ!

ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್‌ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್‌ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…

2 hours ago