children
ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಯಿಂದಾಗಿ 70ಕ್ಕೂ ಹೆಚ್ಚು ಮಕ್ಕಳು ಶಾಲೆಯನ್ನೇ ತೊರೆದಿರುವ ಘಟನೆ ನಡೆದಿದೆ.
ಕಳೆದ ಕೆಲ ದಿನಗಳಿಂದ ಶಾಲೆಯಲ್ಲಿ ಮೊಟೆ ವಿತರಣೆ ಮಾಡುವ ವಿಚಾರದಲ್ಲಿ ಪರ ವಿರೋಧ ಚರ್ಚೆ ಸೃಷ್ಟಿಯಾಗಿತ್ತು. ಈ ಹಿಂದೆಯೇ ಮಕ್ಕಳಿಗೆ ಮೊಟ್ಟೆ ಕೊಟ್ಟರೆ ಶಾಲೆ ಬಿಡಿಸುವುದಾಗಿ ಪೋಷಕರು ಖಡಕ್ ಆಗಿ ಹೇಳಿದ್ದರು.
ಈ ಹಿನ್ನೆಲೆಯಲ್ಲಿ ತೀವ್ರ ಇಕ್ಕಟ್ಟಿಗೆ ಸಿಲುಕಿದ್ದ ಅಧಿಕಾರಿಗಳು ನಿಯಮದಂತೆಯೇ ಮೊಟ್ಟೆ ವಿತರಣೆ ಆರಂಭಿಸಿದ್ದಾರೆ. ಈ ಬೆನ್ನಲ್ಲೇ 70ಕ್ಕೂ ಹೆಚ್ಚು ಮಕ್ಕಳು ಶಾಲೆಯನ್ನೇ ತೊರೆದಿದ್ದಾರೆ.
ಘಟನೆಯ ಹಿನ್ನೆಲೆ: ಶಾಲೆ ಬಳಿ ವೀರಭದ್ರೇಶ್ವರಸ್ವಾಮಿ ದೇವಾಲಯ ಇರುವುದರಿಂದ ಮೊಟ್ಟೆ ವಿತರಣೆ ಮಾಡಬಾರದು. ದೇಗುಲದ ಸುತ್ತಮುತ್ತ ಮಾಂಸಹಾರ, ಮೊಟ್ಟೆಯನ್ನು ನಿಷೇಧಿಸಲಾಗಿದೆ ಎಂದು ಕೆಲವು ಮಂದಿ ಪೋಷಕರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಮೊಟ್ಟೆ ಬದಲಿಗೆ ಬಾಳೆಹಣ್ಣು ಅಥವಾ ಕಡ್ಲೆ ಮಿಠಾಯಿ ವಿತರಣೆ ಮಾಡಲಾಗುತ್ತಿತ್ತು. ಆದರೆ ಇತ್ತೀಚೆಗೆ ನಿಯಮದಂತೆ ಮೊಟ್ಟೆ ವಿತರಣೆ ಮಾಡಲು ಮುಂದಾಗಿದ್ದು, ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಪರಿಣಾಮ ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…