children
ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಯಿಂದಾಗಿ 70ಕ್ಕೂ ಹೆಚ್ಚು ಮಕ್ಕಳು ಶಾಲೆಯನ್ನೇ ತೊರೆದಿರುವ ಘಟನೆ ನಡೆದಿದೆ.
ಕಳೆದ ಕೆಲ ದಿನಗಳಿಂದ ಶಾಲೆಯಲ್ಲಿ ಮೊಟೆ ವಿತರಣೆ ಮಾಡುವ ವಿಚಾರದಲ್ಲಿ ಪರ ವಿರೋಧ ಚರ್ಚೆ ಸೃಷ್ಟಿಯಾಗಿತ್ತು. ಈ ಹಿಂದೆಯೇ ಮಕ್ಕಳಿಗೆ ಮೊಟ್ಟೆ ಕೊಟ್ಟರೆ ಶಾಲೆ ಬಿಡಿಸುವುದಾಗಿ ಪೋಷಕರು ಖಡಕ್ ಆಗಿ ಹೇಳಿದ್ದರು.
ಈ ಹಿನ್ನೆಲೆಯಲ್ಲಿ ತೀವ್ರ ಇಕ್ಕಟ್ಟಿಗೆ ಸಿಲುಕಿದ್ದ ಅಧಿಕಾರಿಗಳು ನಿಯಮದಂತೆಯೇ ಮೊಟ್ಟೆ ವಿತರಣೆ ಆರಂಭಿಸಿದ್ದಾರೆ. ಈ ಬೆನ್ನಲ್ಲೇ 70ಕ್ಕೂ ಹೆಚ್ಚು ಮಕ್ಕಳು ಶಾಲೆಯನ್ನೇ ತೊರೆದಿದ್ದಾರೆ.
ಘಟನೆಯ ಹಿನ್ನೆಲೆ: ಶಾಲೆ ಬಳಿ ವೀರಭದ್ರೇಶ್ವರಸ್ವಾಮಿ ದೇವಾಲಯ ಇರುವುದರಿಂದ ಮೊಟ್ಟೆ ವಿತರಣೆ ಮಾಡಬಾರದು. ದೇಗುಲದ ಸುತ್ತಮುತ್ತ ಮಾಂಸಹಾರ, ಮೊಟ್ಟೆಯನ್ನು ನಿಷೇಧಿಸಲಾಗಿದೆ ಎಂದು ಕೆಲವು ಮಂದಿ ಪೋಷಕರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಮೊಟ್ಟೆ ಬದಲಿಗೆ ಬಾಳೆಹಣ್ಣು ಅಥವಾ ಕಡ್ಲೆ ಮಿಠಾಯಿ ವಿತರಣೆ ಮಾಡಲಾಗುತ್ತಿತ್ತು. ಆದರೆ ಇತ್ತೀಚೆಗೆ ನಿಯಮದಂತೆ ಮೊಟ್ಟೆ ವಿತರಣೆ ಮಾಡಲು ಮುಂದಾಗಿದ್ದು, ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಪರಿಣಾಮ ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…