children
ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆಯಿಂದಾಗಿ 70ಕ್ಕೂ ಹೆಚ್ಚು ಮಕ್ಕಳು ಶಾಲೆಯನ್ನೇ ತೊರೆದಿರುವ ಘಟನೆ ನಡೆದಿದೆ.
ಕಳೆದ ಕೆಲ ದಿನಗಳಿಂದ ಶಾಲೆಯಲ್ಲಿ ಮೊಟೆ ವಿತರಣೆ ಮಾಡುವ ವಿಚಾರದಲ್ಲಿ ಪರ ವಿರೋಧ ಚರ್ಚೆ ಸೃಷ್ಟಿಯಾಗಿತ್ತು. ಈ ಹಿಂದೆಯೇ ಮಕ್ಕಳಿಗೆ ಮೊಟ್ಟೆ ಕೊಟ್ಟರೆ ಶಾಲೆ ಬಿಡಿಸುವುದಾಗಿ ಪೋಷಕರು ಖಡಕ್ ಆಗಿ ಹೇಳಿದ್ದರು.
ಈ ಹಿನ್ನೆಲೆಯಲ್ಲಿ ತೀವ್ರ ಇಕ್ಕಟ್ಟಿಗೆ ಸಿಲುಕಿದ್ದ ಅಧಿಕಾರಿಗಳು ನಿಯಮದಂತೆಯೇ ಮೊಟ್ಟೆ ವಿತರಣೆ ಆರಂಭಿಸಿದ್ದಾರೆ. ಈ ಬೆನ್ನಲ್ಲೇ 70ಕ್ಕೂ ಹೆಚ್ಚು ಮಕ್ಕಳು ಶಾಲೆಯನ್ನೇ ತೊರೆದಿದ್ದಾರೆ.
ಘಟನೆಯ ಹಿನ್ನೆಲೆ: ಶಾಲೆ ಬಳಿ ವೀರಭದ್ರೇಶ್ವರಸ್ವಾಮಿ ದೇವಾಲಯ ಇರುವುದರಿಂದ ಮೊಟ್ಟೆ ವಿತರಣೆ ಮಾಡಬಾರದು. ದೇಗುಲದ ಸುತ್ತಮುತ್ತ ಮಾಂಸಹಾರ, ಮೊಟ್ಟೆಯನ್ನು ನಿಷೇಧಿಸಲಾಗಿದೆ ಎಂದು ಕೆಲವು ಮಂದಿ ಪೋಷಕರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಮೊಟ್ಟೆ ಬದಲಿಗೆ ಬಾಳೆಹಣ್ಣು ಅಥವಾ ಕಡ್ಲೆ ಮಿಠಾಯಿ ವಿತರಣೆ ಮಾಡಲಾಗುತ್ತಿತ್ತು. ಆದರೆ ಇತ್ತೀಚೆಗೆ ನಿಯಮದಂತೆ ಮೊಟ್ಟೆ ವಿತರಣೆ ಮಾಡಲು ಮುಂದಾಗಿದ್ದು, ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಪರಿಣಾಮ ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…