ಮಂಡ್ಯ

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ ಕುಗ್ಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ಹೇಳಿದರು.

ಇಂದು ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ “ಸುರಕ್ಷತ ಅಂತರ್ಜಲ ದಿನ”ದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಾಗಾರ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಸಮಯವನ್ನು ಬಹುತೇಕ ಟಿ.ವಿ, ಮೊಬೈಲ್‌ಗಳಲ್ಲಿಯೆ ಕಳೆಯುತ್ತಿದ್ದೇವೆ. ಸಮಾಜ ಜವಾಬ್ದಾರಿಯನ್ನು ಮರೆತಿದ್ದೇವೆ ಎಂದು ತಿಳಿಸಿದರು.

ಅತಿಯಾದ ಮೊಬೈಲ್ ಬಳಕೆಯಿಂದ ಮೆದುಳು ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಮನುಷ್ಯರಲ್ಲಿ ಹೆಚ್ಚಾಗುತ್ತಿವೆ. 20 ವರ್ಷಗಳ ಹಿಂದೆ ಜನರು ತಮ್ಮ ಕುಟುಂಬ ಸ್ನೇಹಿತರೊಂದಿಗೆ ಸಮಯ ಕಳೆದು ಕೆಲಸದ ಒತ್ತಡವನ್ನು ನಿವಾರಣೆ ಮಾಡಿಕೊಳ್ಳುತ್ತಿದ್ದರು ಹಾಗೂ ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುತ್ತಿದ್ದರು ಆದರೆ ಇಂದು ಅತಿಯಾದ ಮೊಬೈಲ್ ಬಳಕೆಯಿಂದ ಎಲ್ಲರ ಬದುಕಿನಲ್ಲಿಯೂ ಒತ್ತಡ ಹೆಚ್ಚಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಪ್ರಸ್ತುತ ತಂತ್ರಜ್ಞಾನವನ್ನು ಬಳಸಿ ಯಾವುದೇ ಪ್ರಶ್ನೆಗಳಿಗಾದರೂ ಉತ್ತರವನ್ನು ಕ್ಷಣಾರ್ಧದಲ್ಲಿಯೇ ಕಂಡುಕೊಳ್ಳಬಹುದು. ಅಂತರ್ಜಾಲವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು. ಹೆಚ್ಚಿನ ಸಮಯ ಅಂತರ್ಜಾಲದಲ್ಲಿ ಕಳೆಯುವುದು ಒಳ್ಳೆಯದಲ್ಲ ಸಾಧ್ಯವಾದಷ್ಟು ಅಂತರ್ಜಾಲದಿಂದ ದೂರ ಉಳಿಯಬೇಕು. ಸಾರ್ವಜನಿಕರು ಇದರ ಕುರಿತಾಗಿ ಅರಿತುಕೊಳ್ಳಬೇಕು ಎಂದರು.

ಕಚೇರಿ ಕೆಲಸಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯವಾಗಿ ಹಂಚಿಕೊಳ್ಳಬೇಡಿ. ಸೈಬರ್ ಗಳ್ಳರು ನಿಮ್ಮ ಸಂಪೂರ್ಣ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪಡೆದು ನಿಮ್ಮ ಹಿಂದೆ ಬೀಳುತ್ತಾರೆ ಆದ್ದರಿಂದ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿಯಿರಿ. ಸೈಬರ್ ಕಳ್ಳರಿಂದ ಯಾವುದೇ ಕರೆ ಬಂದರೂ ಸಹ ಧೃತಿಗೆಡದೆ ಸೈಬರ್ ಸಹಾಯವಾಣಿಗೆ ಕರೆ ಮಾಡಿ ಪ್ರಕರಣ ದಾಖಲಿಸಿ ಸೈಬರ್ ವಂಚನೆಯಿಂದ ದೂರ ಉಳಿಯಿರಿ ಹಾಗೂ ಇದರ ಕುರಿತಾಗಿ ನಿಮ್ಮ ಒಡನಾಡಿಗಳಿಗೂ ಅರಿವು ಮೂಡಿಸಿ ಎಂದು ಹೇಳಿದರು.

ರಾಷ್ಟ್ರೀಯ ಮಾಹಿತಿ ಕೇಂದ್ರದ ಹಿರಿಯ ತಾಂತ್ರಿಕ ನಿರ್ದೇಶಕರಾದ ಸಂಗೀತ ಮಂಜುನಾಥ್ ಅವರು ಮಾತನಾಡಿ ಇವತ್ತಿನ ಮಕ್ಕಳು ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್ ಫೇಸ್ಬುಕ್ ಗಳಲ್ಲಿ ಮುಳುಗಿ ಹೋಗಿದ್ದಾರೆ. ಇದರಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಮಾನಸಿಕ ಸಮಸ್ಯೆ ಹೆಚ್ಚಾಗಿ ಉದ್ಭವಿಸುತ್ತಿದೆ. ಮಕ್ಕಳು ಹಿರಿಯರೊಂದಿಗೆ ಸಮಯ ಕಳೆಯುವುದನ್ನು ಮರೆತು ಹೋಗಿದ್ದಾರೆ ಎಂದು ಹೇಳಿದರು.

ಜನರು ಸಾಮಾಜಿಕ ಜಾಲತಾಣ ವೈಯಕ್ತಿಕ ಫೋಟೋಗಳ ಹಂಚಿಕೆಯನ್ನು ಕಡಿಮೆ ಮಾಡಬೇಕು ಇದರಿಂದ ಸೈಬರ್ ಕಳ್ಳರು ಡೀಪ್ ಫೇಕ್ ನಂತಹ ಅಪಾಯ ಉಂಟಾಗುತ್ತದೆ. ಅಂತರ್ಜಾಲದಲ್ಲಿ ಫ್ರಾಡ್ ಆಗುವ ಸಾಧ್ಯತೆ ಇರುತ್ತದೆ ಸುಳ್ಳು ಮಾಹಿತಿಯನ್ನು ಹರಿ ಬಿಡಲಾಗುತ್ತಿದೆ. ಜನರು ಇದರ ಕುರಿತಾಗಿ ಅರಿಯಬೇಕು. ಆಗ ಮಾತ್ರ ಆನ್ ಲೈನ್ ವಂಚನೆಯಿಂದ ಬಚಾವಾಗಬಹುದು ಎಂದು ತಿಳಿಸಿದರು.

ಅಪರಿಚಿತ ನಂಬರ್ ಗಳಿಂದ ಕರೆ ಮಾಡಿ ಓ.ಟಿ.ಪಿ. ಯು.ಪಿ.ಐ ಪಿನ್ ಅನ್ನು ಯಾರೆ ಕೇಳಿದರು ಹೇಳಬೇಡಿ. ಇಂತಹ ಕರೆ ಬಂದ ನಂತರ ಭಯ ಪಡದೆ ಐ.ಟಿ ಸೈಬರ್ ನಂಬರ್ 930 ಗೆ ಕರೆ ಮಾಡಿ ಅಥವಾ ಸಂಚಾರ್ ಸತಿ ವೆಬ್ ನಲ್ಲಿ ಪ್ರಕರಣ ದಾಖಲಿಸಿ ಎಂದು ಮಾಹಿತಿ ನೀಡಿದರು.

ಕಾರ್ಯಗಾರದ ನಂತರ ಸೈಬರ್ ಕ್ರೈಂ ಗೆ ಸಂಬಂಧಿಸಿದ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.

ಜಿಲ್ಲಾ ರಾಷ್ಟ್ರೀಯ ಮಾಹಿತಿ ಕೇಂದ್ರದ ಕೆ.ವಿ.ಕೆ ಅಪ್ಪರಾವ್, ರಾಷ್ಟ್ರೀಯ ಮಾಹಿತಿ ಕೇಂದ್ರದ ಸಿಬ್ಬಂದಿ ವರ್ಗ ಹಾಗೂ ಜಿಲ್ಲಾ ಪಂಚಾಯತ್ ಸರ್ಕಾರಿ ನೌಕರರು ಉಪಸ್ಥಿತರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

4 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

5 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago