ಮಂಡ್ಯ

ಅಂಗನವಾಡಿಯತ್ತ ತೆರಳಿದ ಚಿಣ್ಣರು- ಸಿಹಿ ತಿನಿಸಿ ಆತ್ಮೀಯವಾಗಿ ಸ್ವಾಗತಿಸಿದ ಸಿಇಒ

ಮಂಡ್ಯ: ಜಿಲ್ಲೆಯಾದ್ಯಂತ ಇಂದಿನಿಂದ(ಮೇ.೨೭) ಅಂಗನವಾಡಿ ಕೇಂದ್ರಗಳು ಪುನರಾರಂಭವಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಅಂಗನವಾಡಿ ಕೇಂದ್ರಗಳತ್ತ ಹೆಚ್ಚೆ ಹಾಕಿದರು. ಈ ವೇಳೆ ಮಂಡ್ಯ ತಾಲ್ಲೂಕಿನ ಎಂ,ಜಿ. ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಅಧಿಕಾರಿಗಳು ಮಕ್ಕಳಿಗೆ ಸಿಹಿಯನ್ನು ನೀಡಿ, ಆತ್ಮೀಯವಾಗಿ ಬರಮಾಡಿಕೊಂಡರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಅಸೀಫ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್.ರಾಜಮೂರ್ತಿ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಮಕ್ಕಳಿಗೆ ತಿನ್ನಿಸಿ ಶುಭ ಕೋರಿದರು. ಅಂಗನವಾಡಿಗೆ ಬಂದ ಮಕ್ಕಳಿಗೆ ಗುಲಾಬಿ ಹೂವುಗಳನ್ನು ನೀಡಿ ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಕಲಿಕಾ ಕೇಂದ್ರ ಹಾಗೂ ತರಗತಿ ಕೊಠಡಿಗೆ ಚಾಲನೆ ನೀಡಿ. ಮಕ್ಕಳಿಗೆ ಗುಣಮಟ್ಟ ಶಿಕ್ಷಣವನ್ನು ನೀಡಲು ಅಂಗನವಾಡಿ ಶಿಕ್ಷಕಿಯರಿಗೆ ಸೂಕ್ತ ತರಬೇತಿಯನ್ನು ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಿಇಓ ನಿರ್ದೇಶನ ನೀಡಿದರು.

ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಅಸೀಫ್ ಮಾತನಾಡಿ, ಬೇಸಿಗೆ ರಜಾ ನಂತರ ಮಕ್ಕಳು ಮತ್ತೆ ಮರಳಿ ಅಂಗನವಾಡಿ ಕೇಂದ್ರಗಳತ್ತ ಬಂದಿದ್ದಾರೆ. ಜಿಲ್ಲೆಯಲ್ಲಿರುವ 588 ಅಂಗನವಾಡಿ ಕೇಂದ್ರಗಳನ್ನು ಸ್ವಚ್ಛಗೊಳಿಸಿ ಸಿದ್ದಗೊಳಿಸಲಾಗಿದೆ. ಮಕ್ಕಳಿಗೆ ಕುದಿಸಿ ಆರಿಸಿದ ನೀರನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಹತ್ತಿರದ ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಿ ಪೌಷ್ಢಿಕಾಂಶ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಮನವಿ ಮಾಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಆರ್.ಕುಮಾರಸ್ವಾಮಿ ನೇತೃತ್ವದಲ್ಲಿ ಮಂಡ್ಯ ತಾಲೂಕಿನ ಹೊಸ ಬೂದನೂರು. ಮಂಡ್ಯ ನಗರದಲ್ಲಿರುವ ಶಂಕರಮಠ . ಎಸ್.ಡಿ.ಜಯರಾಂ ಬಡಾವಣೆಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ಹೂ. ಸಿಹಿ ವಿತರಿಸಿ ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಂಡರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಲಿಂಡರ್‌ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…

52 mins ago

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

3 hours ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

3 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

3 hours ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

3 hours ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

4 hours ago