ಮಂಡ್ಯ

ಅಂಗನವಾಡಿಯತ್ತ ತೆರಳಿದ ಚಿಣ್ಣರು- ಸಿಹಿ ತಿನಿಸಿ ಆತ್ಮೀಯವಾಗಿ ಸ್ವಾಗತಿಸಿದ ಸಿಇಒ

ಮಂಡ್ಯ: ಜಿಲ್ಲೆಯಾದ್ಯಂತ ಇಂದಿನಿಂದ(ಮೇ.೨೭) ಅಂಗನವಾಡಿ ಕೇಂದ್ರಗಳು ಪುನರಾರಂಭವಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಅಂಗನವಾಡಿ ಕೇಂದ್ರಗಳತ್ತ ಹೆಚ್ಚೆ ಹಾಕಿದರು. ಈ ವೇಳೆ ಮಂಡ್ಯ ತಾಲ್ಲೂಕಿನ ಎಂ,ಜಿ. ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಅಧಿಕಾರಿಗಳು ಮಕ್ಕಳಿಗೆ ಸಿಹಿಯನ್ನು ನೀಡಿ, ಆತ್ಮೀಯವಾಗಿ ಬರಮಾಡಿಕೊಂಡರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಅಸೀಫ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್.ರಾಜಮೂರ್ತಿ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಮಕ್ಕಳಿಗೆ ತಿನ್ನಿಸಿ ಶುಭ ಕೋರಿದರು. ಅಂಗನವಾಡಿಗೆ ಬಂದ ಮಕ್ಕಳಿಗೆ ಗುಲಾಬಿ ಹೂವುಗಳನ್ನು ನೀಡಿ ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಕಲಿಕಾ ಕೇಂದ್ರ ಹಾಗೂ ತರಗತಿ ಕೊಠಡಿಗೆ ಚಾಲನೆ ನೀಡಿ. ಮಕ್ಕಳಿಗೆ ಗುಣಮಟ್ಟ ಶಿಕ್ಷಣವನ್ನು ನೀಡಲು ಅಂಗನವಾಡಿ ಶಿಕ್ಷಕಿಯರಿಗೆ ಸೂಕ್ತ ತರಬೇತಿಯನ್ನು ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಿಇಓ ನಿರ್ದೇಶನ ನೀಡಿದರು.

ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಅಸೀಫ್ ಮಾತನಾಡಿ, ಬೇಸಿಗೆ ರಜಾ ನಂತರ ಮಕ್ಕಳು ಮತ್ತೆ ಮರಳಿ ಅಂಗನವಾಡಿ ಕೇಂದ್ರಗಳತ್ತ ಬಂದಿದ್ದಾರೆ. ಜಿಲ್ಲೆಯಲ್ಲಿರುವ 588 ಅಂಗನವಾಡಿ ಕೇಂದ್ರಗಳನ್ನು ಸ್ವಚ್ಛಗೊಳಿಸಿ ಸಿದ್ದಗೊಳಿಸಲಾಗಿದೆ. ಮಕ್ಕಳಿಗೆ ಕುದಿಸಿ ಆರಿಸಿದ ನೀರನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಹತ್ತಿರದ ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಿ ಪೌಷ್ಢಿಕಾಂಶ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಮನವಿ ಮಾಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಆರ್.ಕುಮಾರಸ್ವಾಮಿ ನೇತೃತ್ವದಲ್ಲಿ ಮಂಡ್ಯ ತಾಲೂಕಿನ ಹೊಸ ಬೂದನೂರು. ಮಂಡ್ಯ ನಗರದಲ್ಲಿರುವ ಶಂಕರಮಠ . ಎಸ್.ಡಿ.ಜಯರಾಂ ಬಡಾವಣೆಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ಹೂ. ಸಿಹಿ ವಿತರಿಸಿ ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಂಡರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

9 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

11 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

11 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

11 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

11 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

11 hours ago