ಮಂಡ್ಯ

ಅಂಗನವಾಡಿಯತ್ತ ತೆರಳಿದ ಚಿಣ್ಣರು- ಸಿಹಿ ತಿನಿಸಿ ಆತ್ಮೀಯವಾಗಿ ಸ್ವಾಗತಿಸಿದ ಸಿಇಒ

ಮಂಡ್ಯ: ಜಿಲ್ಲೆಯಾದ್ಯಂತ ಇಂದಿನಿಂದ(ಮೇ.೨೭) ಅಂಗನವಾಡಿ ಕೇಂದ್ರಗಳು ಪುನರಾರಂಭವಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಅಂಗನವಾಡಿ ಕೇಂದ್ರಗಳತ್ತ ಹೆಚ್ಚೆ ಹಾಕಿದರು. ಈ ವೇಳೆ ಮಂಡ್ಯ ತಾಲ್ಲೂಕಿನ ಎಂ,ಜಿ. ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಅಧಿಕಾರಿಗಳು ಮಕ್ಕಳಿಗೆ ಸಿಹಿಯನ್ನು ನೀಡಿ, ಆತ್ಮೀಯವಾಗಿ ಬರಮಾಡಿಕೊಂಡರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಅಸೀಫ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್.ರಾಜಮೂರ್ತಿ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಮಕ್ಕಳಿಗೆ ತಿನ್ನಿಸಿ ಶುಭ ಕೋರಿದರು. ಅಂಗನವಾಡಿಗೆ ಬಂದ ಮಕ್ಕಳಿಗೆ ಗುಲಾಬಿ ಹೂವುಗಳನ್ನು ನೀಡಿ ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಕಲಿಕಾ ಕೇಂದ್ರ ಹಾಗೂ ತರಗತಿ ಕೊಠಡಿಗೆ ಚಾಲನೆ ನೀಡಿ. ಮಕ್ಕಳಿಗೆ ಗುಣಮಟ್ಟ ಶಿಕ್ಷಣವನ್ನು ನೀಡಲು ಅಂಗನವಾಡಿ ಶಿಕ್ಷಕಿಯರಿಗೆ ಸೂಕ್ತ ತರಬೇತಿಯನ್ನು ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಿಇಓ ನಿರ್ದೇಶನ ನೀಡಿದರು.

ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಅಸೀಫ್ ಮಾತನಾಡಿ, ಬೇಸಿಗೆ ರಜಾ ನಂತರ ಮಕ್ಕಳು ಮತ್ತೆ ಮರಳಿ ಅಂಗನವಾಡಿ ಕೇಂದ್ರಗಳತ್ತ ಬಂದಿದ್ದಾರೆ. ಜಿಲ್ಲೆಯಲ್ಲಿರುವ 588 ಅಂಗನವಾಡಿ ಕೇಂದ್ರಗಳನ್ನು ಸ್ವಚ್ಛಗೊಳಿಸಿ ಸಿದ್ದಗೊಳಿಸಲಾಗಿದೆ. ಮಕ್ಕಳಿಗೆ ಕುದಿಸಿ ಆರಿಸಿದ ನೀರನ್ನು ಒದಗಿಸುವಂತೆ ಸೂಚನೆ ನೀಡಲಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಹತ್ತಿರದ ಅಂಗನವಾಡಿ ಕೇಂದ್ರಗಳಿಗೆ ಕಳುಹಿಸಿ ಪೌಷ್ಢಿಕಾಂಶ ಆಹಾರದ ಜೊತೆಗೆ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಮನವಿ ಮಾಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಆರ್.ಕುಮಾರಸ್ವಾಮಿ ನೇತೃತ್ವದಲ್ಲಿ ಮಂಡ್ಯ ತಾಲೂಕಿನ ಹೊಸ ಬೂದನೂರು. ಮಂಡ್ಯ ನಗರದಲ್ಲಿರುವ ಶಂಕರಮಠ . ಎಸ್.ಡಿ.ಜಯರಾಂ ಬಡಾವಣೆಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ಹೂ. ಸಿಹಿ ವಿತರಿಸಿ ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಂಡರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

1 hour ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

13 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

14 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

16 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

16 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

20 hours ago