ಮಂಡ್ಯ

ಶಾಲೆಗಳಲ್ಲಿ ಮಕ್ಕಳ ಕಲರವ : ಹೂ, ಸಿಹಿ ಕೊಟ್ಟು ಸ್ವಾಗತಿಸಿದ ಶಿಕ್ಷಕರು

ಮಂಡ್ಯ : ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದರು. ಅಂತೆಯೇ ಶಿಕ್ಷಕರು ಹೂವು ಹಾಗೂ ಸಿಹಿ ತಿನಿಸು ಕೊಟ್ಟು ಸ್ವಾಗತಿಸಿದರು. ಇನ್ನು ಶಾಸಕ ರವಿಕುಮಾರ್ ಗಣಿಗ ಹಾಗೂ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.

ಮೊದಲ ದಿನ ಶೇ.60ರಷ್ಟು ಹೆಚ್ಚು ವಿದ್ಯಾರ್ಥಿಗಳು ಹಾಜರಾದರು. ರಜೆಯಿಂದಾಗಿ ಖಾಲಿ ಹೊಡೆಯುತ್ತಿದ್ದ ಶಾಲಾ ಆವರಣದಲ್ಲಿ ಮಕ್ಕಳ ಕಲರವ ಜೋರಾಗಿತ್ತು. ಇನ್ನು ವಿದ್ಯಾರ್ಥಿಗಳನ್ನು ಸೆಳೆಯಲು ಶಿಕ್ಷಕರು, ಎಸ್‌ಡಿಎಂಸಿ ಆಡಳಿತ ಮಂಡಳಿ ಹಲವು ಸಿದ್ಧತೆ ಮಾಡಿಕೊಂಡಿದ್ದರು. ಅದರಂತೆ ಶಾಲೆಗಳನ್ನು ತಳಿರು, ತೋರಣಗಳಿಂದ ಅಲಂಕಾರ ಮಾಡಲಾಗಿತ್ತು. ಶಾಲೆಗೆ ಹಾಜರಾದ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಗುಲಾಬಿ ಹೂ ಹಾಗೂ ಚಾಕೊಲೇಟ್ ನೀಡಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಎಲ್ಲ ಶಾಲೆಗಳಲ್ಲಿಯೂ ಬಿಸಿಯೂಟದ ಜತೆಗೆ ಸಿಹಿ ವಿತರಿಸಲಾಯಿತು. 1816 ಸರ್ಕಾರಿ, 160 ಅನುದಾನಿತ ಹಾಗೂ 469 ಅನುದಾನರಹಿತ, 83 ಸಮಾಜ ಕಲ್ಯಾಣ ಇಲಾಖೆ, 4 ಕೇಂದ್ರೀಯ ವಿದ್ಯಾಲಯ, 1 ಜವಾಹರ್ ನವೋದಯ ವಿದ್ಯಾಲಯಗಳು ಪುನಾರಂಭಗೊಂಡವು.

ಎತ್ತಿನಗಾಡಿಯಲ್ಲಿ ಬಂದ ಎಂಎಲ್‌ಎ: ತಾಲೂಕಿನ ಬಿ.ಹೊಸೂರು ಕಾಲನಿ ಸರ್ಕಾರಿ ಶಾಲೆಗೆ ಶಾಸಕ ರವಿಕುಮಾರ್ ಗಣಿಗ ಅವರು ಎತ್ತಿನಗಾಡಿ ಮೂಲಕ ಬಂದರು. ಈ ಸಂದರ್ಭ ಪೂರ್ಣಕುಂಭದೊಂದಿಗೆ ಶಾಸಕರನ್ನು ಶಾಲಾ ಮಕ್ಕಳು ಸ್ವಾಗತಿಸಿದರು. ಶಾಸಕರು ಮಕ್ಕಳಿಗೆ ಗುಲಾಬಿ ಹೂ, ಸಿಹಿ ಹಾಗೂ ಸಮವಸ್ತ್ರ, ಪುಸ್ತಕ ನೀಡಿದರು.

ಬಳಿಕ ಮಾತನಾಡಿದ ಅವರು, ಮಕ್ಕಳು ಚೆನ್ನಾಗಿ ಓದಿ ಮುಂದೆ ಉನ್ನತ ಹುದ್ದೆ ಅಲಂಕರಿಸಬೇಕು. ಸರ್ಕಾರಿ ಶಾಲೆಗಳು ಬಹಳ ಸಂಕಷ್ಟದ ಪರಿಸ್ಥಿತಿಯಲ್ಲಿದ್ದು, ಇದರಿಂದಾಗಿ ಖಾಸಗಿ ಶಾಲೆಗಳ ಮೊರೆ ಹೋಗಿದ್ದಾರೆ. ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಶೈಕ್ಷಣಿಕ ಚಟುವಟಿಕೆ ಬದಲಾವಣೆ ಆಗಬೇಕು. ಶಾಲೆಗಳ ಅಭಿವೃದ್ಧಿಗೆ ನನ್ನಿಂದಾಗುವ ಸೇವೆ ಮಾಡುತ್ತೇನೆ. ಸರ್ಕಾರಿ ಶಾಲೆಗಳು ಮಾದರಿ ಶಾಲೆಗಳಾಗಿ ಮಕ್ಕಳ ಭವಿಷ್ಯ ರೂಪಿಸಬೇಕು. ಶಿಕ್ಷಕರು ಸಹ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಟ್ಟು ಸಹಕರಿಸಿ. ಮಕ್ಕಳು ಚೆನ್ನಾಗಿ ಓದುವ ಮೂಲಕ ಒಳ್ಳೆಯ ವ್ಯಕ್ತಿಗಳಾಗಿ ಎಂದು ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳಿಗೆ ಸಿಹಿ ತಿನಿಸಿದ ಡಿಸಿ: ಚಿಕ್ಕಮಂಡ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ಎಚ್.ಎನ್.ಗೋಪಾಲಕೃಷ್ಣ ಅವರು ಮಕ್ಕಳಿಗೆ ಸಿಹಿ, ಹೂ, ಪುಸ್ತಕ ಹಾಗೂ ಸಮವಸ್ತ್ರ ನೀಡಿ ಮಕ್ಕಳನ್ನು ಬರಮಾಡಿಕೊಂಡರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಡಿಡಿಪಿಐ ಎಸ್.ಟಿ.ಜವರೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್, ಮುಖ್ಯಶಿಕ್ಷಕ ಆರ್.ದೇವರಾಜು, ಅಕ್ಷರ ದಾಸೋಹ ಅಧಿಕಾರಿ ಹರೀಶ್ ಹಾಜರಿದ್ದರು.

lokesh

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

8 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

12 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

12 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

13 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

13 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

14 hours ago