ಮಂಡ್ಯ

ಶಾಲೆಗಳಲ್ಲಿ ಮಕ್ಕಳ ಕಲರವ : ಹೂ, ಸಿಹಿ ಕೊಟ್ಟು ಸ್ವಾಗತಿಸಿದ ಶಿಕ್ಷಕರು

ಮಂಡ್ಯ : ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದರು. ಅಂತೆಯೇ ಶಿಕ್ಷಕರು ಹೂವು ಹಾಗೂ ಸಿಹಿ ತಿನಿಸು ಕೊಟ್ಟು ಸ್ವಾಗತಿಸಿದರು. ಇನ್ನು ಶಾಸಕ ರವಿಕುಮಾರ್ ಗಣಿಗ ಹಾಗೂ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.

ಮೊದಲ ದಿನ ಶೇ.60ರಷ್ಟು ಹೆಚ್ಚು ವಿದ್ಯಾರ್ಥಿಗಳು ಹಾಜರಾದರು. ರಜೆಯಿಂದಾಗಿ ಖಾಲಿ ಹೊಡೆಯುತ್ತಿದ್ದ ಶಾಲಾ ಆವರಣದಲ್ಲಿ ಮಕ್ಕಳ ಕಲರವ ಜೋರಾಗಿತ್ತು. ಇನ್ನು ವಿದ್ಯಾರ್ಥಿಗಳನ್ನು ಸೆಳೆಯಲು ಶಿಕ್ಷಕರು, ಎಸ್‌ಡಿಎಂಸಿ ಆಡಳಿತ ಮಂಡಳಿ ಹಲವು ಸಿದ್ಧತೆ ಮಾಡಿಕೊಂಡಿದ್ದರು. ಅದರಂತೆ ಶಾಲೆಗಳನ್ನು ತಳಿರು, ತೋರಣಗಳಿಂದ ಅಲಂಕಾರ ಮಾಡಲಾಗಿತ್ತು. ಶಾಲೆಗೆ ಹಾಜರಾದ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಗುಲಾಬಿ ಹೂ ಹಾಗೂ ಚಾಕೊಲೇಟ್ ನೀಡಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಎಲ್ಲ ಶಾಲೆಗಳಲ್ಲಿಯೂ ಬಿಸಿಯೂಟದ ಜತೆಗೆ ಸಿಹಿ ವಿತರಿಸಲಾಯಿತು. 1816 ಸರ್ಕಾರಿ, 160 ಅನುದಾನಿತ ಹಾಗೂ 469 ಅನುದಾನರಹಿತ, 83 ಸಮಾಜ ಕಲ್ಯಾಣ ಇಲಾಖೆ, 4 ಕೇಂದ್ರೀಯ ವಿದ್ಯಾಲಯ, 1 ಜವಾಹರ್ ನವೋದಯ ವಿದ್ಯಾಲಯಗಳು ಪುನಾರಂಭಗೊಂಡವು.

ಎತ್ತಿನಗಾಡಿಯಲ್ಲಿ ಬಂದ ಎಂಎಲ್‌ಎ: ತಾಲೂಕಿನ ಬಿ.ಹೊಸೂರು ಕಾಲನಿ ಸರ್ಕಾರಿ ಶಾಲೆಗೆ ಶಾಸಕ ರವಿಕುಮಾರ್ ಗಣಿಗ ಅವರು ಎತ್ತಿನಗಾಡಿ ಮೂಲಕ ಬಂದರು. ಈ ಸಂದರ್ಭ ಪೂರ್ಣಕುಂಭದೊಂದಿಗೆ ಶಾಸಕರನ್ನು ಶಾಲಾ ಮಕ್ಕಳು ಸ್ವಾಗತಿಸಿದರು. ಶಾಸಕರು ಮಕ್ಕಳಿಗೆ ಗುಲಾಬಿ ಹೂ, ಸಿಹಿ ಹಾಗೂ ಸಮವಸ್ತ್ರ, ಪುಸ್ತಕ ನೀಡಿದರು.

ಬಳಿಕ ಮಾತನಾಡಿದ ಅವರು, ಮಕ್ಕಳು ಚೆನ್ನಾಗಿ ಓದಿ ಮುಂದೆ ಉನ್ನತ ಹುದ್ದೆ ಅಲಂಕರಿಸಬೇಕು. ಸರ್ಕಾರಿ ಶಾಲೆಗಳು ಬಹಳ ಸಂಕಷ್ಟದ ಪರಿಸ್ಥಿತಿಯಲ್ಲಿದ್ದು, ಇದರಿಂದಾಗಿ ಖಾಸಗಿ ಶಾಲೆಗಳ ಮೊರೆ ಹೋಗಿದ್ದಾರೆ. ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಶೈಕ್ಷಣಿಕ ಚಟುವಟಿಕೆ ಬದಲಾವಣೆ ಆಗಬೇಕು. ಶಾಲೆಗಳ ಅಭಿವೃದ್ಧಿಗೆ ನನ್ನಿಂದಾಗುವ ಸೇವೆ ಮಾಡುತ್ತೇನೆ. ಸರ್ಕಾರಿ ಶಾಲೆಗಳು ಮಾದರಿ ಶಾಲೆಗಳಾಗಿ ಮಕ್ಕಳ ಭವಿಷ್ಯ ರೂಪಿಸಬೇಕು. ಶಿಕ್ಷಕರು ಸಹ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಟ್ಟು ಸಹಕರಿಸಿ. ಮಕ್ಕಳು ಚೆನ್ನಾಗಿ ಓದುವ ಮೂಲಕ ಒಳ್ಳೆಯ ವ್ಯಕ್ತಿಗಳಾಗಿ ಎಂದು ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳಿಗೆ ಸಿಹಿ ತಿನಿಸಿದ ಡಿಸಿ: ಚಿಕ್ಕಮಂಡ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ಎಚ್.ಎನ್.ಗೋಪಾಲಕೃಷ್ಣ ಅವರು ಮಕ್ಕಳಿಗೆ ಸಿಹಿ, ಹೂ, ಪುಸ್ತಕ ಹಾಗೂ ಸಮವಸ್ತ್ರ ನೀಡಿ ಮಕ್ಕಳನ್ನು ಬರಮಾಡಿಕೊಂಡರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಡಿಡಿಪಿಐ ಎಸ್.ಟಿ.ಜವರೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಉದಯಕುಮಾರ್, ಮುಖ್ಯಶಿಕ್ಷಕ ಆರ್.ದೇವರಾಜು, ಅಕ್ಷರ ದಾಸೋಹ ಅಧಿಕಾರಿ ಹರೀಶ್ ಹಾಜರಿದ್ದರು.

lokesh

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

3 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

3 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

3 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

3 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

3 hours ago