consoled
ಮದ್ದೂರು : ಬೀದಿ ನಾಯಿ ದಾಳಿ ವೇಳೆ ಗಾಯಗೊಂಡು ಚಿಕಿತ್ಸೆಗೆಂದು ಮಂಡ್ಯ ಜಿಲ್ಲಾಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಸಂಚಾರಿ ಪೋಲೀಸರ ವಾಹನ ತಪಾಸಣೆ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟ ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ರಿತೀಕ್ಷಾ ನಿವಾಸಕ್ಕೆ ಬುಧವಾರ ಶಾಸಕ ಕೆ.ಎಂ.ಉದಯ ಭೇಟಿ ನೀಡಿ ಪೋಷಕರು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ತಾಲ್ಲೂಕಿನ ಗೊರವನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಕೆ.ಎಂ.ಉದಯ ಮೃತರ ಪೋಷಕರು ಮತ್ತು ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಘಟನೆ ಸಂಬಂಧ ಮಾಹಿತಿ ಪಡೆದರು. ಬಳಿಕ ತಪ್ಪಿತಸ್ಥರ ವಿರುದ್ಧ ಅಗತ್ಯ ಶಿಸ್ತು ಕ್ರಮದ ಭರವಸೆ ನೀಡುವ ಜೊತೆಗೆ ವೈಯಕ್ತಿಕ ಪರಿಹಾರ ನೀಡಿದರು.
ಮೃತಳ ತಾತ ಹಾಗೂ ತಂದೆ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರಲ್ಲದೆ ನಾಯಿ ಕಡಿತದಿಂದ ಚಿಕಿತ್ಸೆಗೆಂದು ತಾಲೂಕು ಆಸ್ಪತ್ರೆಗೆ ತೆರಳಿದ್ದ ವೇಳೆ ಕರ್ತವ್ಯ ನಿರತ ವೈದ್ಯರು ಕೇವಲ ಚುಚ್ಚುಮದ್ದನ್ನು ನೀಡಿ ಬಳಿಕ ಸಮರ್ಪಕವಾಗಿ ಚಿಕಿತ್ಸೆ ನೀಡದೆ ಮಂಡ್ಯಕ್ಕೆ ತೆರಳುವಂತೆ ಸೂಚನೆ ನೀಡುವ ಜತೆಗೆ ಯಾವುದೇ ತುರ್ತು ಚಿಕಿತ್ಸಾ ವಾಹನದ ವ್ಯವಸ್ಥೆಯನ್ನು ಕಲ್ಪಿಸದಿರುವ ಬಗ್ಗೆ ಶಾಸಕರಲ್ಲಿ ತಮ್ಮ ಅಳಲು ತೋಡಿಕೊಂಡರು.
ತಾಲ್ಲೂಕು ಆಸ್ಪತ್ರೆಗೆ ಬರುವ ರೋಗಿಗಳಿಗೆ ಕರ್ತವ್ಯನಿರತ ವೈದ್ಯರು ಸಮರ್ಪಕವಾಗಿ ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ತಾವುಗಳು ಇದಕ್ಕೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಮುಂದೆ ಇಂತಹ ಪ್ರಕರಣಗಳು ಜರುಗದಂತೆ ಎಚ್ಚರಿಕೆ ವಹಿಸಬೇಕೆಂದು ಮನವಿ ಮಾಡಿದರು.
ಬಳಿಕ ಶಾಸಕ ಕೆ.ಎಂ.ಉದಯ, ನಡೆದ ಘಟನೆ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ದಕ್ಷಿಣ ವಲಯ ಐ.ಜಿ.ಪಿ ಬೋರಲಿಂಗಯ್ಯರವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡು ತಪ್ಪಿತಸ್ಥರಿಗೆ ಶಿಕ್ಷೆ ಆಗೇ ಆಗುತ್ತದೆ ಎಂದು ಹೇಳಿದರು.
ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್ಗಳನ್ನು…
ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…
ಗ್ರಾಮದಲ್ಲಿ ಆತಂಕ ಸೃಷ್ಟಿಸಿದ ಆನೆಗಳ ಹಿಂಡು; ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ: ಸಮೀಪದ ಅರಣ್ಯ ಪ್ರದೇಶದಿಂದ…
ಒಂದು ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಅಪಘಾತ; ಗಣಿಗಾರಿಕೆ ಹಗಲು-ರಾತ್ರಿ ನಡೆಯುವುದರಿಂದ ಟಿಪ್ಪರ್ಗಳ ಸಂಚಾರ ಹೆಚ್ಚಳ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ…