ಮಂಡ್ಯ

ಬೈಕ್‌ನಿಂದ ಬಿದ್ದು ಮಗು ಸಾವು ಪ್ರಕರಣ: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಉದಯ್

ಮದ್ದೂರು : ಬೀದಿ ನಾಯಿ ದಾಳಿ ವೇಳೆ ಗಾಯಗೊಂಡು ಚಿಕಿತ್ಸೆಗೆಂದು ಮಂಡ್ಯ ಜಿಲ್ಲಾಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಸಂಚಾರಿ ಪೋಲೀಸರ ವಾಹನ ತಪಾಸಣೆ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟ ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮದ ರಿತೀಕ್ಷಾ ನಿವಾಸಕ್ಕೆ ಬುಧವಾರ ಶಾಸಕ ಕೆ.ಎಂ.ಉದಯ ಭೇಟಿ ನೀಡಿ ಪೋಷಕರು ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ತಾಲ್ಲೂಕಿನ ಗೊರವನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಕೆ.ಎಂ.ಉದಯ ಮೃತರ ಪೋಷಕರು ಮತ್ತು ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಘಟನೆ ಸಂಬಂಧ ಮಾಹಿತಿ ಪಡೆದರು. ಬಳಿಕ ತಪ್ಪಿತಸ್ಥರ ವಿರುದ್ಧ ಅಗತ್ಯ ಶಿಸ್ತು ಕ್ರಮದ ಭರವಸೆ ನೀಡುವ ಜೊತೆಗೆ ವೈಯಕ್ತಿಕ ಪರಿಹಾರ ನೀಡಿದರು.

ಮೃತಳ ತಾತ ಹಾಗೂ ತಂದೆ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರಲ್ಲದೆ ನಾಯಿ ಕಡಿತದಿಂದ ಚಿಕಿತ್ಸೆಗೆಂದು ತಾಲೂಕು ಆಸ್ಪತ್ರೆಗೆ ತೆರಳಿದ್ದ ವೇಳೆ ಕರ್ತವ್ಯ ನಿರತ ವೈದ್ಯರು ಕೇವಲ ಚುಚ್ಚುಮದ್ದನ್ನು ನೀಡಿ ಬಳಿಕ ಸಮರ್ಪಕವಾಗಿ ಚಿಕಿತ್ಸೆ ನೀಡದೆ ಮಂಡ್ಯಕ್ಕೆ ತೆರಳುವಂತೆ ಸೂಚನೆ ನೀಡುವ ಜತೆಗೆ ಯಾವುದೇ ತುರ್ತು ಚಿಕಿತ್ಸಾ ವಾಹನದ ವ್ಯವಸ್ಥೆಯನ್ನು ಕಲ್ಪಿಸದಿರುವ ಬಗ್ಗೆ ಶಾಸಕರಲ್ಲಿ ತಮ್ಮ ಅಳಲು ತೋಡಿಕೊಂಡರು.

ತಾಲ್ಲೂಕು ಆಸ್ಪತ್ರೆಗೆ ಬರುವ ರೋಗಿಗಳಿಗೆ ಕರ್ತವ್ಯನಿರತ ವೈದ್ಯರು ಸಮರ್ಪಕವಾಗಿ ಚಿಕಿತ್ಸೆ ನೀಡದ ಹಿನ್ನೆಲೆಯಲ್ಲಿ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ತಾವುಗಳು ಇದಕ್ಕೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಮುಂದೆ ಇಂತಹ ಪ್ರಕರಣಗಳು ಜರುಗದಂತೆ ಎಚ್ಚರಿಕೆ ವಹಿಸಬೇಕೆಂದು ಮನವಿ ಮಾಡಿದರು.

ಬಳಿಕ ಶಾಸಕ ಕೆ.ಎಂ.ಉದಯ, ನಡೆದ ಘಟನೆ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ದಕ್ಷಿಣ ವಲಯ ಐ.ಜಿ.ಪಿ ಬೋರಲಿಂಗಯ್ಯರವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡು ತಪ್ಪಿತಸ್ಥರಿಗೆ ಶಿಕ್ಷೆ ಆಗೇ ಆಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

7 mins ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

13 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

13 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

13 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

13 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago