ಮಂಡ್ಯ : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬರೆಯಲಾಗಿದ್ದ ಲಂಚ ಆರೋಪ ಪತ್ರದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಇದೀಗ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೆ.ಆರ್.ಪೇಟೆಯ ಕೃಷಿ ಅಧಿಕಾರಿಗಳಾದ ಶಿವಪ್ರಸಾದ್, ಗುರುದತ್ ಎನ್ನುವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಅರೋಪ ಪತ್ರವನ್ನು ಬರೆದಿರುವುದು ಇವರೇ ಎನ್ನುವುದು ತಿಳಿದುಬಂದಿದೆ. ಇನ್ನು ಪತ್ರ ಬರೆಯಲು ಹೇಳಿದ್ಯಾರು? ಲಂಚ ಕೇಳಿದ್ದಕ್ಕೆ ರಾಜ್ಯಪಾಲರಿಗೆ ಪತ್ರ ಬರೆಯಲಾಯಿತೇ? ಈ ಪತ್ರ ಬರೆದಿರುವ ಹಿಂದಿನ ಉದ್ದೇಶವೇನು? ಹೀಗೆ ಹಲವು ಆಯಾಮಗಳಲ್ಲಿ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.
ಇನ್ನು ಈ ಬಗ್ಗೆ ಮಂಡ್ಯದಲ್ಲಿ ಕೃಷಿ ಇಲಾಖೆ ಸಚಿವ ಎನ್.ಚಲುವರಾಯಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಈವರೆಗೂ ಸಿಐಡಿ ಅಧಿಕಾರಿಗಳ ಯಾವುದೇ ವರದಿ ನನಗೆ ತಲುಪಿಲ್ಲ. ಸಿಐಡಿ ತಂಡ ವರದಿ ನೀಡಿದ ಬಳಿಕ ಗೊತ್ತಾಗಲಿದೆ. ಮೇಲ್ನೋಟಕ್ಕೆ ಮಂಡ್ಯದ ಅಧಿಕಾರಿಗಳಲ್ಲ ಎಂದು ಖಚಿತವಾಗಿ ಗೊತ್ತಾಗಿದೆ. ಆ ಇಬ್ಬರೇ ಎಲ್ಲರ ಸಹಿ ಮಾಡಿದ್ದಾರೆ ಎಂಬುದು ಗೊತ್ತಾಗಿದೆ. ಮಾಹಿತಿ ಪಡೆಯುತ್ತೇನೆ, ಸುಮ್ಮನೆ ಊಹಾಪೋಹದಿಂದ ಮಾತನಾಡಲ್ಲ ಎಂದು ಸ್ಪಷ್ಟಪಡಿಸಿದರು.
ನಮಗೆ ಜನಪರ ಕೆಲಸ ಮಾಡುವುದು ಮುಖ್ಯ. ಪ್ರಕರಣದ ಹಿಂದೆ ಯಾರಿದ್ದಾರೆ ಎಂದು ಹೇಳಲು ಹೋಗುವುದಿಲ್ಲ. ಸಿಐಡಿಗೆ ಜವಾಬ್ದಾರಿ ಕೊಟ್ಟಿದ್ದಾರೆ, ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಸರ್ಕಾರಕ್ಕೆ ವರದಿ ಬರುವ ಮೊದಲೇ ಮಾತನಾಡುವುದು ಸೂಕ್ತವಲ್ಲ. ನಾನೇ ಮೊದಲೇ ನಿರಾಳವಾಗಿದ್ದೆ ಎಂದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…