City Planning Authority employees
ಮಂಡ್ಯ : ಯೋಜನೆ ಅನುಮೋದನೆ ನೀಡಲು ಲಂಚ ಸ್ವೀಕರಿಸುತ್ತಿದ್ದ ನಗರ ಯೋಜನಾ ಪ್ರಾಧಿಕಾರದ ಮೂವರು ನೌಕರರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿರುವ ನಗರ ಯೋಜನಾ ಪ್ರಾಧಿಕಾರದ ಅಸಿಸ್ಟೆಂಟ್ ಡೈರೆಕ್ಟರ್ ಅನನ್ಯ ಮನೋಹರ್, ಟೌನ್ ಪ್ಲಾನರ್ ಸೌಮ್ಯ, ಹೊರ ಗುತ್ತಿಗೆ ನೌಕರ ಹರೀಶ್ ಎಂಬವರೇ ಲೋಕಾ ಬಲೆಗೆ ಬಿದ್ದವರಾಗಿದ್ದಾರೆ. ಮದ್ದೂರು ತಾಲ್ಲೂಕು ಚಂದೂಪುರ ಗ್ರಾಮದ ಪುನೀತ್ ಅವರು ಕಟ್ಟಡ ಕಟ್ಟಲು ಯೋಜನಾ ಅನುಮೋದನೆ ಪತ್ರ ಪಡೆಯುವಂತೆ ಅರ್ಜಿ ಸಲ್ಲಿಸಿದ್ದರು.
ಯೋಜನಾ ಅನುಮೋದನೆ ಪತ್ರ ಪಡೆಯಲು ಅಸಿಸ್ಟೆಂಟ್ ಡೈರೆಕ್ಟರ್ ಅನನ್ಯ ಮನೋಹರ್, ಟೌನ್ ಪ್ಲಾನರ್ ಸೌಮ್ಯ ಅವರು 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು, 8 ತಿಂಗಳಿನಿಂದ ಯೋಜನಾ ಅನುಮೋದನೆ ಪತ್ರ ನೀಡಲು ಸತಾಯಿಸುತ್ತಿದ್ದರು. ಅಂತಿಮವಾಗಿ 30 ಸಾವಿರ ರೂ. ನೀಡುವಂತೆ ಪುನೀತ್ ಅವರಿಗೆ ತಿಳಿಸಿದ್ದರು ಎನ್ನಲಾಗಿದೆ.
ಈ ಸಂಬಂಧ ಪುನೀತ್ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಮಂಗಳವಾರ ನಗರ ಯೋಜನಾ ಪ್ರಾಧಿಕಾರಕ್ಕೆ ಪುನೀತ್ ಅವರು ತೆರಳಿ ಅಧಿಕಾರಿಗಳಿಗೆ ಮೊದಲ ಕಂತಾಗಿ ೧೫ ಸಾವಿರ ರೂ. ಲಂಚ ನೀಡುವಾಗ ಲೋಕಾಯುಕ್ತ ಸಿಪಿಐ ಬ್ಯಾಟರಾಯಿಗೌಡ ನೇತೃತ್ವದಲ್ಲಿ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…