City Planning Authority employees
ಮಂಡ್ಯ : ಯೋಜನೆ ಅನುಮೋದನೆ ನೀಡಲು ಲಂಚ ಸ್ವೀಕರಿಸುತ್ತಿದ್ದ ನಗರ ಯೋಜನಾ ಪ್ರಾಧಿಕಾರದ ಮೂವರು ನೌಕರರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿರುವ ನಗರ ಯೋಜನಾ ಪ್ರಾಧಿಕಾರದ ಅಸಿಸ್ಟೆಂಟ್ ಡೈರೆಕ್ಟರ್ ಅನನ್ಯ ಮನೋಹರ್, ಟೌನ್ ಪ್ಲಾನರ್ ಸೌಮ್ಯ, ಹೊರ ಗುತ್ತಿಗೆ ನೌಕರ ಹರೀಶ್ ಎಂಬವರೇ ಲೋಕಾ ಬಲೆಗೆ ಬಿದ್ದವರಾಗಿದ್ದಾರೆ. ಮದ್ದೂರು ತಾಲ್ಲೂಕು ಚಂದೂಪುರ ಗ್ರಾಮದ ಪುನೀತ್ ಅವರು ಕಟ್ಟಡ ಕಟ್ಟಲು ಯೋಜನಾ ಅನುಮೋದನೆ ಪತ್ರ ಪಡೆಯುವಂತೆ ಅರ್ಜಿ ಸಲ್ಲಿಸಿದ್ದರು.
ಯೋಜನಾ ಅನುಮೋದನೆ ಪತ್ರ ಪಡೆಯಲು ಅಸಿಸ್ಟೆಂಟ್ ಡೈರೆಕ್ಟರ್ ಅನನ್ಯ ಮನೋಹರ್, ಟೌನ್ ಪ್ಲಾನರ್ ಸೌಮ್ಯ ಅವರು 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು, 8 ತಿಂಗಳಿನಿಂದ ಯೋಜನಾ ಅನುಮೋದನೆ ಪತ್ರ ನೀಡಲು ಸತಾಯಿಸುತ್ತಿದ್ದರು. ಅಂತಿಮವಾಗಿ 30 ಸಾವಿರ ರೂ. ನೀಡುವಂತೆ ಪುನೀತ್ ಅವರಿಗೆ ತಿಳಿಸಿದ್ದರು ಎನ್ನಲಾಗಿದೆ.
ಈ ಸಂಬಂಧ ಪುನೀತ್ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ಮಂಗಳವಾರ ನಗರ ಯೋಜನಾ ಪ್ರಾಧಿಕಾರಕ್ಕೆ ಪುನೀತ್ ಅವರು ತೆರಳಿ ಅಧಿಕಾರಿಗಳಿಗೆ ಮೊದಲ ಕಂತಾಗಿ ೧೫ ಸಾವಿರ ರೂ. ಲಂಚ ನೀಡುವಾಗ ಲೋಕಾಯುಕ್ತ ಸಿಪಿಐ ಬ್ಯಾಟರಾಯಿಗೌಡ ನೇತೃತ್ವದಲ್ಲಿ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…