ಮಂಡ್ಯ

ಶುದ್ದ ಕುಡಿಯುವ ನೀರಿನ ಘಟಕ | ಗುತ್ತಿಗೆ ಅವಧಿ ಮುಗಿದರು ಹಸ್ತಾಂತರ ಮಾಡದೆ ಅಕ್ರಮ : ಆರೋಪ

ಮಂಡ್ಯ : ಮಂಡ್ಯ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ 75 ಶುದ್ದ ಕುಡಿಯುವ ನೀರಿನ ಘಟಕಗಳ ಖಾಸಗಿ ಗುತ್ತಿಗೆ ಅವಧಿ ಮುಗಿದು 4 ತಿಂಗಳಾದರೂ ಗ್ರಾಮ ಪಂಚಾಯಿತಿಗಳಿಗೆ ವಹಿಸದೇ ಅಕ್ರಮ ಎಸಗಲಾಗಿದೆ ಎಂದು ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಸತೀಶ್ ಬೂಸ ದೂರಿದ್ದಾರೆ.

ಈ ಕುರಿತು ದಾಖಲೆ ಬಿಡುಗಡೆ ಮಾಡಿ ಹೇಳಿಕೆ ನೀಡಿರುವ ಅವರು, 2020ರ ಫೆ.14ರಂದು 5 ವರ್ಷಗಳ ಗುತ್ತಿಗೆ ಪಡೆದಿರುವ ಖಾಸಗಿ ಕಂಪನಿಯವರು 2025ರ ಫೆ.15 ಕ್ಕೆ ಅವಧಿ ಮುಗಿದರೂ ಗ್ರಾಮ ಪಂಚಾಯಿತಿಗಳಿಗೆ ಘಟಕ ಹಸ್ತಾಂತರಿಸದೇ ಅಕ್ರಮ ಎಸಗಿದ್ದಾರೆ‌. ಇದರಲ್ಲಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಶಾಮೀಲಾಗಿರುವ ಶಂಕೆಯಿದ್ದು ತನಿಖೆ ನಡೆಸಿ ಭ್ರಷ್ಟಾಚಾರ ಎಸಗಿರುವ ಅಧಿಕಾರಿಗಳ ವಿರುದ್ದ ಕ್ರಮ ವಹಿಸುವಂತೆ ಜಿಪಂ ಸಿಇಒ ಅವರನ್ನು ಒತ್ತಾಯಿಸಿದ್ದಾರೆ.

ಮಂಡ್ಯ ತಾಲ್ಲೂಕಿನ 30 ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ 45 ಶುದ್ದ ಕುಡಿಯುವ ನೀರಿನ ಘಟಕಗಳನ್ನು ಹಸ್ತಾಂತರಿಸದೆ ಅಕ್ರಮ ಎಸಗಲಾಗಿದೆ. ಅ ಮೂಲಕ ಲಕ್ಷಾಂತರ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರು.

ಇದೇ ರೀತಿ ಮಂಡ್ಯ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿನ ಶುದ್ದ ನೀರಿನ ಘಟಕಗಳನ್ನು ಟೆಂಡರ್ ಮೂಲಕ ಗುತ್ತಿಗೆ ನೀಡಲಾಗಿದೆ. ಅಲ್ಲೂ ಕೂಡ ಅವಧಿ ಮುಗಿದ ಬಳಿಕ ಗ್ರಾಮ ಪಂಚಾಯಿತಿಗಳಿಗೆ ಘಟಕ ಹಸ್ತಾಂತರಿಸದೆ ಅಕ್ರಮ ಎಸಗಲಾಗಿದೆ.

ಬೂದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 4 ಶುದ್ದ ಕುಡಿಯುವ ನೀರಿನ ಘಟಕಗಳಿಂದ ಕಳೆದ 4 ತಿಂಗಳಿನಿಂದ ಲಕ್ಷಾಂತರ ರೂ. ಗಳನ್ನು ಗುತ್ತಿಗೆದಾರ ಪಡೆದು ವಂಚಿಸಿದ್ದಾನೆ‌. ಅದರಲ್ಲಿ ಆಡಳಿತ ಮಂಡಳಿ ಸದಸ್ಯರು ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಈ ಕುರಿತು ಕ್ರಮ ವಹಿಸಿ ಘಟಕಗಳ ಹಸ್ತಾಂತರ ಪಡೆಯದಿದ್ದಲ್ಲಿ ಹೋರಾಟ ರೂಪಿಸುವುದಾಗಿ ಅವರು ಎಚ್ಚರಿಸಿದ್ದಾರೆ‌.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

1 hour ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

1 hour ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

2 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

3 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

4 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

5 hours ago