ಮಂಡ್ಯ : ಮಂಡ್ಯ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ 75 ಶುದ್ದ ಕುಡಿಯುವ ನೀರಿನ ಘಟಕಗಳ ಖಾಸಗಿ ಗುತ್ತಿಗೆ ಅವಧಿ ಮುಗಿದು 4 ತಿಂಗಳಾದರೂ ಗ್ರಾಮ ಪಂಚಾಯಿತಿಗಳಿಗೆ ವಹಿಸದೇ ಅಕ್ರಮ ಎಸಗಲಾಗಿದೆ ಎಂದು ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಸತೀಶ್ ಬೂಸ ದೂರಿದ್ದಾರೆ.
ಈ ಕುರಿತು ದಾಖಲೆ ಬಿಡುಗಡೆ ಮಾಡಿ ಹೇಳಿಕೆ ನೀಡಿರುವ ಅವರು, 2020ರ ಫೆ.14ರಂದು 5 ವರ್ಷಗಳ ಗುತ್ತಿಗೆ ಪಡೆದಿರುವ ಖಾಸಗಿ ಕಂಪನಿಯವರು 2025ರ ಫೆ.15 ಕ್ಕೆ ಅವಧಿ ಮುಗಿದರೂ ಗ್ರಾಮ ಪಂಚಾಯಿತಿಗಳಿಗೆ ಘಟಕ ಹಸ್ತಾಂತರಿಸದೇ ಅಕ್ರಮ ಎಸಗಿದ್ದಾರೆ. ಇದರಲ್ಲಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಶಾಮೀಲಾಗಿರುವ ಶಂಕೆಯಿದ್ದು ತನಿಖೆ ನಡೆಸಿ ಭ್ರಷ್ಟಾಚಾರ ಎಸಗಿರುವ ಅಧಿಕಾರಿಗಳ ವಿರುದ್ದ ಕ್ರಮ ವಹಿಸುವಂತೆ ಜಿಪಂ ಸಿಇಒ ಅವರನ್ನು ಒತ್ತಾಯಿಸಿದ್ದಾರೆ.
ಮಂಡ್ಯ ತಾಲ್ಲೂಕಿನ 30 ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ 45 ಶುದ್ದ ಕುಡಿಯುವ ನೀರಿನ ಘಟಕಗಳನ್ನು ಹಸ್ತಾಂತರಿಸದೆ ಅಕ್ರಮ ಎಸಗಲಾಗಿದೆ. ಅ ಮೂಲಕ ಲಕ್ಷಾಂತರ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರು.
ಇದೇ ರೀತಿ ಮಂಡ್ಯ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿನ ಶುದ್ದ ನೀರಿನ ಘಟಕಗಳನ್ನು ಟೆಂಡರ್ ಮೂಲಕ ಗುತ್ತಿಗೆ ನೀಡಲಾಗಿದೆ. ಅಲ್ಲೂ ಕೂಡ ಅವಧಿ ಮುಗಿದ ಬಳಿಕ ಗ್ರಾಮ ಪಂಚಾಯಿತಿಗಳಿಗೆ ಘಟಕ ಹಸ್ತಾಂತರಿಸದೆ ಅಕ್ರಮ ಎಸಗಲಾಗಿದೆ.
ಬೂದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 4 ಶುದ್ದ ಕುಡಿಯುವ ನೀರಿನ ಘಟಕಗಳಿಂದ ಕಳೆದ 4 ತಿಂಗಳಿನಿಂದ ಲಕ್ಷಾಂತರ ರೂ. ಗಳನ್ನು ಗುತ್ತಿಗೆದಾರ ಪಡೆದು ವಂಚಿಸಿದ್ದಾನೆ. ಅದರಲ್ಲಿ ಆಡಳಿತ ಮಂಡಳಿ ಸದಸ್ಯರು ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಈ ಕುರಿತು ಕ್ರಮ ವಹಿಸಿ ಘಟಕಗಳ ಹಸ್ತಾಂತರ ಪಡೆಯದಿದ್ದಲ್ಲಿ ಹೋರಾಟ ರೂಪಿಸುವುದಾಗಿ ಅವರು ಎಚ್ಚರಿಸಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…