ಮಂಡ್ಯ

ಶುದ್ದ ಕುಡಿಯುವ ನೀರಿನ ಘಟಕ | ಗುತ್ತಿಗೆ ಅವಧಿ ಮುಗಿದರು ಹಸ್ತಾಂತರ ಮಾಡದೆ ಅಕ್ರಮ : ಆರೋಪ

ಮಂಡ್ಯ : ಮಂಡ್ಯ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ 75 ಶುದ್ದ ಕುಡಿಯುವ ನೀರಿನ ಘಟಕಗಳ ಖಾಸಗಿ ಗುತ್ತಿಗೆ ಅವಧಿ ಮುಗಿದು 4 ತಿಂಗಳಾದರೂ ಗ್ರಾಮ ಪಂಚಾಯಿತಿಗಳಿಗೆ ವಹಿಸದೇ ಅಕ್ರಮ ಎಸಗಲಾಗಿದೆ ಎಂದು ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಸತೀಶ್ ಬೂಸ ದೂರಿದ್ದಾರೆ.

ಈ ಕುರಿತು ದಾಖಲೆ ಬಿಡುಗಡೆ ಮಾಡಿ ಹೇಳಿಕೆ ನೀಡಿರುವ ಅವರು, 2020ರ ಫೆ.14ರಂದು 5 ವರ್ಷಗಳ ಗುತ್ತಿಗೆ ಪಡೆದಿರುವ ಖಾಸಗಿ ಕಂಪನಿಯವರು 2025ರ ಫೆ.15 ಕ್ಕೆ ಅವಧಿ ಮುಗಿದರೂ ಗ್ರಾಮ ಪಂಚಾಯಿತಿಗಳಿಗೆ ಘಟಕ ಹಸ್ತಾಂತರಿಸದೇ ಅಕ್ರಮ ಎಸಗಿದ್ದಾರೆ‌. ಇದರಲ್ಲಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಶಾಮೀಲಾಗಿರುವ ಶಂಕೆಯಿದ್ದು ತನಿಖೆ ನಡೆಸಿ ಭ್ರಷ್ಟಾಚಾರ ಎಸಗಿರುವ ಅಧಿಕಾರಿಗಳ ವಿರುದ್ದ ಕ್ರಮ ವಹಿಸುವಂತೆ ಜಿಪಂ ಸಿಇಒ ಅವರನ್ನು ಒತ್ತಾಯಿಸಿದ್ದಾರೆ.

ಮಂಡ್ಯ ತಾಲ್ಲೂಕಿನ 30 ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ 45 ಶುದ್ದ ಕುಡಿಯುವ ನೀರಿನ ಘಟಕಗಳನ್ನು ಹಸ್ತಾಂತರಿಸದೆ ಅಕ್ರಮ ಎಸಗಲಾಗಿದೆ. ಅ ಮೂಲಕ ಲಕ್ಷಾಂತರ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿದ್ದಾರು.

ಇದೇ ರೀತಿ ಮಂಡ್ಯ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿನ ಶುದ್ದ ನೀರಿನ ಘಟಕಗಳನ್ನು ಟೆಂಡರ್ ಮೂಲಕ ಗುತ್ತಿಗೆ ನೀಡಲಾಗಿದೆ. ಅಲ್ಲೂ ಕೂಡ ಅವಧಿ ಮುಗಿದ ಬಳಿಕ ಗ್ರಾಮ ಪಂಚಾಯಿತಿಗಳಿಗೆ ಘಟಕ ಹಸ್ತಾಂತರಿಸದೆ ಅಕ್ರಮ ಎಸಗಲಾಗಿದೆ.

ಬೂದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 4 ಶುದ್ದ ಕುಡಿಯುವ ನೀರಿನ ಘಟಕಗಳಿಂದ ಕಳೆದ 4 ತಿಂಗಳಿನಿಂದ ಲಕ್ಷಾಂತರ ರೂ. ಗಳನ್ನು ಗುತ್ತಿಗೆದಾರ ಪಡೆದು ವಂಚಿಸಿದ್ದಾನೆ‌. ಅದರಲ್ಲಿ ಆಡಳಿತ ಮಂಡಳಿ ಸದಸ್ಯರು ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಈ ಕುರಿತು ಕ್ರಮ ವಹಿಸಿ ಘಟಕಗಳ ಹಸ್ತಾಂತರ ಪಡೆಯದಿದ್ದಲ್ಲಿ ಹೋರಾಟ ರೂಪಿಸುವುದಾಗಿ ಅವರು ಎಚ್ಚರಿಸಿದ್ದಾರೆ‌.

ಆಂದೋಲನ ಡೆಸ್ಕ್

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

1 hour ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago