Clearance of encroached areas of shops and stores
ನಾಗಮಂಗಲ : ಸಾರ್ವಜನಿಕರ ದೂರು ಹಾಗೂ ಪಾದಚಾರಿ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪುರಸಭೆ ಅಧಿಕಾರಿಗಳು ಪೊಲೀಸರ ರಕ್ಷಣೆಯಲ್ಲಿ ಅಕ್ರಮವಾಗಿ ಅಂಗಡಿ ಮಳಿಗೆಗಳ ಮುಂದೆ ಹೆಚ್ಚುವರಿ ಜಾಗವನ್ನು ಆಕ್ರಮಿಸಿಕೊಂಡಿದ್ದ ಜಾಗವನ್ನು ಬುಧವಾರ ತೆರವುಗೊಳಿಸಿದರು.
ಕಾರ್ಯಾಚರಣೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸಿ. ಶ್ರೀನಿವಾಸ್ ಮತ್ತು ಕಂದಾಯ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರು, ಪುರಸಭೆ ಕಚೇರಿ ಸಿಬ್ಬಂದಿಗಳು ಪಟ್ಟಣದ ವ್ಯಾಪ್ತಿಯ ವಾಣಿಜ್ಯ ಅಂಗಡಿ ಮಳಿಗೆಗಳ ಮುಂಭಾಗ ಹೆಚ್ಚುವರಿ ಜಾಗ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡಿಕೊಂಡಿದ್ದ ಮಾಲೀಕರಿಗೆ ಪುರಸಭೆ ವತಿಯಿಂದ ಹಲವು ಬಾರಿ ತಿಳವಳಿಕೆ ಹೇಳಿ ನೋಟಿಸ್ ಜಾರಿ ಮಾಡಿದ್ದರೂ ಅಕ್ರಮ ಒತ್ತುವರಿ ಜಾಗ ತೆರವು ಗೊಳಿಸಿರಲಿಲ. ಇದನ್ನು ಮನಗಂಡ ಪುರಸಭೆ ಅಧಿಕಾರಿಗಳು ಬುಧವಾರ ಟಿಬಿ ಬಡಾವಣೆಯ ಕೋಟೆಬೆಟ್ಟ ರಸ್ತೆಯ ಹತ್ತಕ್ಕೂ ಹೆಚ್ಚು ಮಳಿಗೆಗಳ ಮುಂಭಾಗದ ಒತ್ತುವರಿ ಜಾಗವನ್ನು ತೆರವುಗೊಳಿಸಿದರು.
ಈ ಸಂಬಂಧ ಪುರಸಭೆಯ ಮುಖ್ಯಾಧಿಕಾರಿ ಶ್ರೀನಿವಾಸ್ ಮಾತನಾಡಿ, ಅಕ್ರಮವಾಗಿ ತಮ್ಮ ವ್ಯಾಪ್ತಿಯ ಮೀರಿ ಜಾಗವನ್ನು ಹೊತ್ತುವರಿ ಮಾಡಿಕೊಂಡಿರುವ ಅಂಗಡಿ ಮಾಲೀಕರ ಬಗ್ಗೆ ಪುರಸಭೆ ಸದಸ್ಯರು ಮತ್ತು ಸಚಿವರ ಬಳಿ ಈಗಾಗಲೇ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು. ಪಟ್ಟಣದ ವ್ಯಾಪ್ತಿಯಲ್ಲಿ ಸಂಚಾರಿ ರಸ್ತೆ ಸುಗಮ ಮಾಡುವ ಉದ್ದೇಶದಿಂದ ಈ ಕ್ರಮ ಜರುಗಿಸಲಾಗಿದೆ ಪಟ್ಟಣದ ಪ್ರಮುಖರಸ್ತೆ ವ್ಯಾಪಾರೀಕರಣದ ರಸ್ತೆಗಳಲ್ಲಿ ವ್ಯಾಪಾರಸ್ಥರು ಆಕ್ರಮವಾಗಿ ರಸ್ತೆ ಬದಿಯಲ್ಲಿ ಅಂಗಡಿ ಸಾಮಾನುಗಳನ್ನು ಜೋಡಿಸಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ.
ಇದು ಅಪರಾಧವಾಗುತ್ತದೆ ಹಿಂದಿನಿಂದ ಕಾರ್ಯಾಚರಣೆಗೆ ಸಾರ್ವಜನಿಕರು ಒತ್ತಾಯವಿದೆ. ವ್ಯಾಪಾರಸ್ಥರು ಪುರಸಭೆಗೆ ಸಹಕರಿಸಿ ತಮ್ಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿಕೊಂಡು ವ್ಯಾಪಾರ ಮಾಡಬೇಕು ಹಾಗೂ ಇತ್ತೀಚೆಗೆ ಬೀದಿಬದಿ ವ್ಯಾಪಾರಿಗಳು ನಿಗದಿಪಡಿಸಿದ ಜಾಗವನ್ನು ಬಿಟ್ಟು ಬೇರೆ ಬೇರೆ ಸ್ಥಳಗಳಲ್ಲಿ ವ್ಯಾಪಾರ ಮಾಡುತ್ತಿದ್ದು, ಇದು ಅಪರಾಧವಾಗಿರುತ್ತದೆ. ಪುರಸಭೆಗೆ ಮಾಹಿತಿ ನೀಡಿ ನಿಮಗೆ ನಿಗದಿ ಮಾಡಿದ ಜಾಗದಲ್ಲಿ ವ್ಯಾಪಾರ ಮಾಡಬೇಕು ಎಂದು ತಿಳಿಸಿದ್ದಾರೆ.
ಬೆಳಗಾವಿ : ಕಾವೇರಿ, ಕಬಿನಿ, ಅರ್ಕಾವತಿ, ತುಂಗಭದ್ರಾ, ಭದ್ರಾ ಸೇರಿದಂತೆ ವಿವಿಧ ನದಿಗಳಿಗೆ ಸಂಸ್ಕರಿಸದ ಗೃಹ ತ್ಯಾಜ್ಯ ಜಲ ಹರಿಯುತ್ತಿದ್ದು,…
ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ…
ಬೆಳಗಾವಿ: ಮೈಸೂರು ನಗರದಲ್ಲಿರುವ ಚಾಮರಾಜೇಂದ್ರ ಮೃಗಾಲಯದಲ್ಲಿ 356 ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಕೇವಲ 9 ಮಂದಿ ಮಾತ್ರ ಖಾಯಂ ನೌಕರರಾಗಿದ್ದಾರೆ…
ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ ಹಾಗೂ ಗದ್ದಲದ ಮಧ್ಯೆ ಕರ್ನಾಟಕ ದ್ವೇಷಭಾಷಣ ಹಾಗೂ ದ್ವೇಷಾಪರಾಧಗಳ ಪ್ರತಿಬಂಧನ ಮಸೂದೆ 2025ನ್ನು…
ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ…
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…