ಮಂಡ್ಯ

ಅಂಗಡಿ ಮಳಿಗೆಗಳ ಒತ್ತುವರಿ ಜಾಗ ತೆರವು

ನಾಗಮಂಗಲ : ಸಾರ್ವಜನಿಕರ ದೂರು ಹಾಗೂ ಪಾದಚಾರಿ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪುರಸಭೆ ಅಧಿಕಾರಿಗಳು ಪೊಲೀಸರ ರಕ್ಷಣೆಯಲ್ಲಿ ಅಕ್ರಮವಾಗಿ ಅಂಗಡಿ ಮಳಿಗೆಗಳ ಮುಂದೆ ಹೆಚ್ಚುವರಿ ಜಾಗವನ್ನು ಆಕ್ರಮಿಸಿಕೊಂಡಿದ್ದ ಜಾಗವನ್ನು ಬುಧವಾರ ತೆರವುಗೊಳಿಸಿದರು.

ಕಾರ್ಯಾಚರಣೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸಿ. ಶ್ರೀನಿವಾಸ್ ಮತ್ತು ಕಂದಾಯ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರು, ಪುರಸಭೆ ಕಚೇರಿ ಸಿಬ್ಬಂದಿಗಳು ಪಟ್ಟಣದ ವ್ಯಾಪ್ತಿಯ ವಾಣಿಜ್ಯ ಅಂಗಡಿ ಮಳಿಗೆಗಳ ಮುಂಭಾಗ ಹೆಚ್ಚುವರಿ ಜಾಗ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡಿಕೊಂಡಿದ್ದ ಮಾಲೀಕರಿಗೆ ಪುರಸಭೆ ವತಿಯಿಂದ ಹಲವು ಬಾರಿ ತಿಳವಳಿಕೆ ಹೇಳಿ ನೋಟಿಸ್ ಜಾರಿ ಮಾಡಿದ್ದರೂ ಅಕ್ರಮ ಒತ್ತುವರಿ ಜಾಗ ತೆರವು ಗೊಳಿಸಿರಲಿಲ. ಇದನ್ನು ಮನಗಂಡ ಪುರಸಭೆ ಅಧಿಕಾರಿಗಳು ಬುಧವಾರ ಟಿಬಿ ಬಡಾವಣೆಯ ಕೋಟೆಬೆಟ್ಟ ರಸ್ತೆಯ ಹತ್ತಕ್ಕೂ ಹೆಚ್ಚು ಮಳಿಗೆಗಳ ಮುಂಭಾಗದ ಒತ್ತುವರಿ ಜಾಗವನ್ನು ತೆರವುಗೊಳಿಸಿದರು.

ಈ ಸಂಬಂಧ ಪುರಸಭೆಯ ಮುಖ್ಯಾಧಿಕಾರಿ ಶ್ರೀನಿವಾಸ್ ಮಾತನಾಡಿ, ಅಕ್ರಮವಾಗಿ ತಮ್ಮ ವ್ಯಾಪ್ತಿಯ ಮೀರಿ ಜಾಗವನ್ನು ಹೊತ್ತುವರಿ ಮಾಡಿಕೊಂಡಿರುವ ಅಂಗಡಿ ಮಾಲೀಕರ ಬಗ್ಗೆ ಪುರಸಭೆ ಸದಸ್ಯರು ಮತ್ತು ಸಚಿವರ ಬಳಿ ಈಗಾಗಲೇ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು. ಪಟ್ಟಣದ ವ್ಯಾಪ್ತಿಯಲ್ಲಿ ಸಂಚಾರಿ ರಸ್ತೆ ಸುಗಮ ಮಾಡುವ ಉದ್ದೇಶದಿಂದ ಈ ಕ್ರಮ ಜರುಗಿಸಲಾಗಿದೆ ಪಟ್ಟಣದ ಪ್ರಮುಖರಸ್ತೆ ವ್ಯಾಪಾರೀಕರಣದ ರಸ್ತೆಗಳಲ್ಲಿ ವ್ಯಾಪಾರಸ್ಥರು ಆಕ್ರಮವಾಗಿ ರಸ್ತೆ ಬದಿಯಲ್ಲಿ ಅಂಗಡಿ ಸಾಮಾನುಗಳನ್ನು ಜೋಡಿಸಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ.

ಇದು ಅಪರಾಧವಾಗುತ್ತದೆ ಹಿಂದಿನಿಂದ ಕಾರ್ಯಾಚರಣೆಗೆ ಸಾರ್ವಜನಿಕರು ಒತ್ತಾಯವಿದೆ. ವ್ಯಾಪಾರಸ್ಥರು ಪುರಸಭೆಗೆ ಸಹಕರಿಸಿ ತಮ್ಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿಕೊಂಡು ವ್ಯಾಪಾರ ಮಾಡಬೇಕು ಹಾಗೂ ಇತ್ತೀಚೆಗೆ ಬೀದಿಬದಿ ವ್ಯಾಪಾರಿಗಳು ನಿಗದಿಪಡಿಸಿದ ಜಾಗವನ್ನು ಬಿಟ್ಟು ಬೇರೆ ಬೇರೆ ಸ್ಥಳಗಳಲ್ಲಿ ವ್ಯಾಪಾರ ಮಾಡುತ್ತಿದ್ದು, ಇದು ಅಪರಾಧವಾಗಿರುತ್ತದೆ. ಪುರಸಭೆಗೆ ಮಾಹಿತಿ ನೀಡಿ ನಿಮಗೆ ನಿಗದಿ ಮಾಡಿದ ಜಾಗದಲ್ಲಿ ವ್ಯಾಪಾರ ಮಾಡಬೇಕು ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

10 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

13 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

14 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

19 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

25 mins ago