ಮಂಡ್ಯ

ಅಂಗಡಿ ಮಳಿಗೆಗಳ ಒತ್ತುವರಿ ಜಾಗ ತೆರವು

ನಾಗಮಂಗಲ : ಸಾರ್ವಜನಿಕರ ದೂರು ಹಾಗೂ ಪಾದಚಾರಿ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪುರಸಭೆ ಅಧಿಕಾರಿಗಳು ಪೊಲೀಸರ ರಕ್ಷಣೆಯಲ್ಲಿ ಅಕ್ರಮವಾಗಿ ಅಂಗಡಿ ಮಳಿಗೆಗಳ ಮುಂದೆ ಹೆಚ್ಚುವರಿ ಜಾಗವನ್ನು ಆಕ್ರಮಿಸಿಕೊಂಡಿದ್ದ ಜಾಗವನ್ನು ಬುಧವಾರ ತೆರವುಗೊಳಿಸಿದರು.

ಕಾರ್ಯಾಚರಣೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸಿ. ಶ್ರೀನಿವಾಸ್ ಮತ್ತು ಕಂದಾಯ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರು, ಪುರಸಭೆ ಕಚೇರಿ ಸಿಬ್ಬಂದಿಗಳು ಪಟ್ಟಣದ ವ್ಯಾಪ್ತಿಯ ವಾಣಿಜ್ಯ ಅಂಗಡಿ ಮಳಿಗೆಗಳ ಮುಂಭಾಗ ಹೆಚ್ಚುವರಿ ಜಾಗ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡಿಕೊಂಡಿದ್ದ ಮಾಲೀಕರಿಗೆ ಪುರಸಭೆ ವತಿಯಿಂದ ಹಲವು ಬಾರಿ ತಿಳವಳಿಕೆ ಹೇಳಿ ನೋಟಿಸ್ ಜಾರಿ ಮಾಡಿದ್ದರೂ ಅಕ್ರಮ ಒತ್ತುವರಿ ಜಾಗ ತೆರವು ಗೊಳಿಸಿರಲಿಲ. ಇದನ್ನು ಮನಗಂಡ ಪುರಸಭೆ ಅಧಿಕಾರಿಗಳು ಬುಧವಾರ ಟಿಬಿ ಬಡಾವಣೆಯ ಕೋಟೆಬೆಟ್ಟ ರಸ್ತೆಯ ಹತ್ತಕ್ಕೂ ಹೆಚ್ಚು ಮಳಿಗೆಗಳ ಮುಂಭಾಗದ ಒತ್ತುವರಿ ಜಾಗವನ್ನು ತೆರವುಗೊಳಿಸಿದರು.

ಈ ಸಂಬಂಧ ಪುರಸಭೆಯ ಮುಖ್ಯಾಧಿಕಾರಿ ಶ್ರೀನಿವಾಸ್ ಮಾತನಾಡಿ, ಅಕ್ರಮವಾಗಿ ತಮ್ಮ ವ್ಯಾಪ್ತಿಯ ಮೀರಿ ಜಾಗವನ್ನು ಹೊತ್ತುವರಿ ಮಾಡಿಕೊಂಡಿರುವ ಅಂಗಡಿ ಮಾಲೀಕರ ಬಗ್ಗೆ ಪುರಸಭೆ ಸದಸ್ಯರು ಮತ್ತು ಸಚಿವರ ಬಳಿ ಈಗಾಗಲೇ ಸಭೆಯಲ್ಲಿ ಚರ್ಚೆ ನಡೆಸಲಾಗಿತ್ತು. ಪಟ್ಟಣದ ವ್ಯಾಪ್ತಿಯಲ್ಲಿ ಸಂಚಾರಿ ರಸ್ತೆ ಸುಗಮ ಮಾಡುವ ಉದ್ದೇಶದಿಂದ ಈ ಕ್ರಮ ಜರುಗಿಸಲಾಗಿದೆ ಪಟ್ಟಣದ ಪ್ರಮುಖರಸ್ತೆ ವ್ಯಾಪಾರೀಕರಣದ ರಸ್ತೆಗಳಲ್ಲಿ ವ್ಯಾಪಾರಸ್ಥರು ಆಕ್ರಮವಾಗಿ ರಸ್ತೆ ಬದಿಯಲ್ಲಿ ಅಂಗಡಿ ಸಾಮಾನುಗಳನ್ನು ಜೋಡಿಸಿಕೊಂಡು ವ್ಯಾಪಾರ ಮಾಡುತ್ತಿದ್ದಾರೆ.

ಇದು ಅಪರಾಧವಾಗುತ್ತದೆ ಹಿಂದಿನಿಂದ ಕಾರ್ಯಾಚರಣೆಗೆ ಸಾರ್ವಜನಿಕರು ಒತ್ತಾಯವಿದೆ. ವ್ಯಾಪಾರಸ್ಥರು ಪುರಸಭೆಗೆ ಸಹಕರಿಸಿ ತಮ್ಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿಕೊಂಡು ವ್ಯಾಪಾರ ಮಾಡಬೇಕು ಹಾಗೂ ಇತ್ತೀಚೆಗೆ ಬೀದಿಬದಿ ವ್ಯಾಪಾರಿಗಳು ನಿಗದಿಪಡಿಸಿದ ಜಾಗವನ್ನು ಬಿಟ್ಟು ಬೇರೆ ಬೇರೆ ಸ್ಥಳಗಳಲ್ಲಿ ವ್ಯಾಪಾರ ಮಾಡುತ್ತಿದ್ದು, ಇದು ಅಪರಾಧವಾಗಿರುತ್ತದೆ. ಪುರಸಭೆಗೆ ಮಾಹಿತಿ ನೀಡಿ ನಿಮಗೆ ನಿಗದಿ ಮಾಡಿದ ಜಾಗದಲ್ಲಿ ವ್ಯಾಪಾರ ಮಾಡಬೇಕು ಎಂದು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

6 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

7 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

7 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

8 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

8 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

9 hours ago