ಮಂಡ್ಯ

ದಲಿತ ವ್ಯಕ್ತಿಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ : ಶಾಸಕನ ಆಪ್ತ ಅರೆಸ್ಟ್

ಬೆಂಗಳೂರು  26 ವರ್ಷದ ದಲಿತ ವ್ಯಕ್ತಿಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿದ ಆರೋಪದ ಮೇಲೆ 55 ವರ್ಷದ ಬಿ ಬಿ ಎಂ ಪಿ ಮಾಜಿ ಕಾರ್ಪೊರೇಟರ್ ಸೇರಿದಂತೆ ಐವರನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ 26 ವರ್ಷದ ದಲಿತ ವ್ಯಕ್ತಿಯನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಿದ ಆರೋಪದ ಮೇಲೆ 55 ವರ್ಷದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಸೇರಿದಂತೆ ಐವರನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ.

 

ಮಂಡ್ಯ ಜಿಲ್ಲೆಯ ಮದ್ದೂರಿನವರಾದ ಶ್ರೀಧರ್ ಗಂಗಾಧರ್ ಎಂದು ಗುರುತಿಸಲಾಗಿದ್ದು, ಆರೋಪಿಗಳು ಒತ್ತಾಯಿಸಿ ಇಸ್ಲಾಂಗೆ ಮತಾಂತರಿಸಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಹುಬ್ಬಳ್ಳಿಯ ನವನಗರದ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಸೆ.9ರಂದು 12 ಆರೋಪಿಗಳ ವಿರುದ್ಧ ಮೊಕದ್ದಮೆ ದಾಖಲಾಗಿದ್ದು, ಇತ್ತೀಚೆಗೆ ಬನಶಂಕರಿ ಠಾಣೆಗೆ ವರ್ಗಾಯಿಸಲಾಗಿತ್ತು.ಬನಶಂಕರಿ ವಾರ್ಡ್‌ನ ಮಾಜಿ ಕಾರ್ಪೊರೇಟರ್ ಅನ್ಸಾರ್ ಪಾಷಾ ನಗರ ಶಾಸಕರೊಬ್ಬರ ಆಪ್ತರು ಎನ್ನಲಾಗಿದೆ.

 

ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ಆಗಿದ್ದ  ಅನ್ಸರ್ ಪಾಷಾ ಕೆಎಸ್ ಲೇಔಟ್ ನಿವಾಸಿಯಾಗಿದ್ದರು. ಈತನ ಸ್ನೇಹಿತ ಬನಶಂಕರಿ ನಿವಾಸಿ ನಯಾಜ್ ಪಾಷಾ ಹಾಗೂ ಕೆಎಸ್ ಲೇಔಟ್ ನಿವಾಸಿ ಹಾಜಿಸಾಬ್ ಅಲಿಯಾಸ್ ಶಮೀಮ್ ಶಾಲಿಕ್, ಮಂಡ್ಯದ ಅತ್ತಾವರ ರೆಹಮಾನ್ ಮತ್ತು ಕೆಎಸ್ ಲೇಔಟ್‌ನ ಶಬ್ಬೀರ್ ಖಾನ್ ಬಂಧಿತ ಆರೋಪಿಗಳಾಗಿದ್ದಾರೆ.ಐವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

andolana

Recent Posts

ಡಿ.ಕೆ.ಶಿವಕುಮಾರ್‌ ನಿಯತ್ತಿನ ಸೈನಿಕ: ಶಾಸಕ ರವಿಕುಮಾರ್‌ ಗಣಿಗ ಬ್ಯಾಟಿಂಗ್‌

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ…

2 hours ago

ಸಾಗರದಲ್ಲಿ ಭಾರತದ ಸಾರ್ವಭೌಮತ್ವ: ವಿಶಾಖಪಟ್ಟಣಂನಲ್ಲಿ ರಾಷ್ಟ್ರಪತಿ ಮುರ್ಮುರಿಂದ ನೌಕಾಶಕ್ತಿ ಪ್ರದರ್ಶನ ವೀಕ್ಷಣೆ

ವಿಶಾಖಪಟ್ಟಣಂ: ಭಾರತೀಯ ನೌಕಾಪಡೆಯ ವಿಶ್ವದ ವಿವಿಧ ದೇಶಗಳ ನೌಕಾಪಡೆಗಳೊಂದಿಗೆ ಸೇರಿ ತನ್ನ ಅಪ್ರತಿಮ ಶೌರ್ಯ ಹಾಗೂ ಸನ್ನದ್ಧತೆಯನ್ನು ಬುಧವಾರ ವಿಶಾಖಪಟ್ಟಣಂ…

2 hours ago

ಗುಂಡ್ಲುಪೇಟೆ| ಹುಲಿ ದಾಳಿಗೆ ಹಸು ಸಾವು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ‌ ದಾಳಿ ನಡೆಸಿ ಕೊಂದು…

3 hours ago

ರಾಜ್ಯ ಸರ್ಕಾರಕ್ಕೆ ಮಾಧ್ಯಮಗಳನ್ನು ಕಂಡರೆ ನಡುಕವೇಕೆ?: ಜೆಡಿಎಸ್‌ ಲೇವಡಿ

ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್‌ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…

3 hours ago

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಪತ್ರ ವೈರಲ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…

4 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ಸಂಪನ್ನ: ಎ.ಈ.ರಘು ಸಂತಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…

5 hours ago