Minister N. Cheluvarayaswamy instructs action against officials harassing for bribes.
ಮಂಡ್ಯ : ಮುಖ್ಯಮಂತ್ರಿ ಬದಲಾವಣೆ ವಿಚಾರ ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗೆ ಬಿಟ್ಟದ್ದು. ಆದರೆ, ಬಿಹಾರ ವಿಧಾನಸಭೆ ಚುನಾವಣೆ ಬಳಿಕ ಸಚಿವ ಸಂಪುಟ ಪುನರ್ ರಚನೆಯಾಗಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ೧೩೮ ಶಾಸಕರ ಪೈಕಿ ೩೪ ಜನ ಸಚಿವರಾಗಿದ್ದಾರೆ. ಸಚಿವ ಸ್ಥಾನದ ಉಳಿದ ಆಕಾಂಕ್ಷಿಗಳಿಗೆ ಪಕ್ಷ ಏನಾದರೂ ಪರ್ಯಾಯ ವ್ಯವಸ್ಥೆ ಮಾಡಬೇಕಾಗುತ್ತದೆ. ಆದರೆ, ೩೪ ಜನರಲ್ಲಿ ಎಷ್ಟು ಸಚಿವರನ್ನು ಕೈಬಿಡುತ್ತಾರೆ ಎನ್ನುವುದು ಪಕ್ಷಕ್ಕೆ ಬಿಟ್ಟ ವಿಚಾರ. ಯಾವುದೇ ಬದಲಾವಣೆ ಇದ್ದರೂ ಅದನ್ನು ಮುಖ್ಯಮಂತ್ರಿ ಮಾಡುತ್ತಾರೆ. ಅಂತೆಯೇ ಸಿಎಂ ಡಿನ್ನರ್ ಮೀಟಿಂಗ್ಗೂ ರಾಜಕೀಯಕ್ಕೂ ಸಂಬಂಧವಿಲ್ಲ ಎಂದು ಹೇಳಿದರು.
ಇದನ್ನೂ ಓದಿ:-ಮಳೆಯಿಂದ ಒಡೆದು ಹೋಗಿದ್ದ ಸಿಡಿಎಸ್ ನಾಲೆ ಪರಿಶೀಲಿಸಿದ ಸಚಿವ ಚಲುವರಾಯಸ್ವಾಮಿ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಅನಾರೋಗ್ಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ, ದೇವೇಗೌಡರ ಆರೋಗ್ಯದ ಬಗ್ಗೆ ವಿಚಾರಿಸಿದ್ದೇನೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇವತ್ತು ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಇದೆ. ಬೇರೆಯವರ ಮೂಲಕ ಅವರ ಆರೋಗ್ಯ ವಿಚಾರಿಸಿದ್ದೇನೆ. ನೇರವಾಗಿ ಮಾತನಾಡುವ ಪರಿಸ್ಥಿತಿ ಇಲ್ಲ. ಸಾಧ್ಯವಾದರೆ ಭೇಟಿ ಮಾಡುತ್ತೇನೆ. ಅವರ ಆರೋಗ್ಯ ಚೇತರಿಕೆ ಆಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…
ಬೆಂಗಳೂರು: ಕಳೆದ ನವೆಂಬರ್ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…
ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…
ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…