ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಬೇಕು. ಸಿದ್ದರಾಮಯ್ಯ ಹಾಗೂ ಡಿಕೆಶಿ ಬಹಳ ಚೆನ್ನಾಗಿದ್ದಾರೆ. ಅವರಿಬ್ಬರ ನಡುವೆ ಹೊಂದಾಣಿಕೆಯೂ ಚೆನ್ನಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.
ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂಬ ವಿಚಾರ ಒಂದೆಡೆಯಾದರೆ, ಮತ್ತೊಂದೆಡೆ ಲಿಂಗಾಯತರು ಸಿಎಂ ಆಗಬೇಕೆಂಬ ಕೂಗೆದ್ದಿದೆ. ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ಹಾಗೂ ಲಿಂಗಾಯತರು ಸಿಎಂ ಆಗಬೇಕು ಎಂಬ ಶಿವಾಚಾರ್ಯ ಶ್ರೀಗಳ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ಸ್ವಾಮೀಜಿಗಳ ಹೇಳಿಕೆ ಹಿಂದೆ ವಿರೋಧ ಪಕ್ಷಗಳ ಕೈವಾಡ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಸಮಯ ಸರಿಯಿಲ್ಲ ಅನಿಸುತ್ತಿದೆ ಅಥವಾ ಯಾರದ್ದೋ ಕೈವಾಡ ಇರಬಹುದು. ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಅಭಿವೃದ್ಧಿ ಹಾಗೂ ಗ್ಯಾರಂಟಿ ಯೋಜನೆಗಳು ಜಾರಿಯಾಗುತ್ತಿವೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ ಕೇವಲ 17ರಲ್ಲಿ ಮಾತ್ರ ಗೆದ್ದಿದೆ. ಇದರಿಂದ ಅವರು ಸ್ವಲ್ಪ ಶೇಕ್ ಆಗಿದ್ದಾರೆ ಎಂದು ಕಿಡಿಕಾರಿದರು.
ಸಿಎಂ ಹಾಗೂ ಡಿಸಿಎಂ ನಡುವೆ ಹೊಂದಾಣಿಕೆ ತುಂಬಾ ಚೆನ್ನಾಗಿದೆ. ಹೈಕಮಾಂಡ್ ಅವರಿಬ್ಬರನ್ನು ಕೂರಿಸಿಕೊಂಡು ಚರ್ಚೆ ಮಾಡುತ್ತದೆ. ಹೈಕಮಾಂಡ್ ಯಾವಾಗ ತೀರ್ಮಾನ ಮಾಡಬೇಕೋ ಆಗ ಮಾಡುತ್ತೆ ಎಂದರು.
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…
ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…
ನವದೆಹಲಿ: ಭಾರತ್ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತೀಯ ಸೇನೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ…
ಮೈಸೂರು : ನಗರದಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ) ರಚಿಸಿರುವ ನಿವೇಶನಗಳನ್ನು ತೆರವುಗೊಳಿಸಿ ದೊಡ್ಡಕೆರೆ ಮತ್ತು ಲಿಂಗಾಂಬುಧಿ ಕೆರೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು…