ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಬೇಕು. ಸಿದ್ದರಾಮಯ್ಯ ಹಾಗೂ ಡಿಕೆಶಿ ಬಹಳ ಚೆನ್ನಾಗಿದ್ದಾರೆ. ಅವರಿಬ್ಬರ ನಡುವೆ ಹೊಂದಾಣಿಕೆಯೂ ಚೆನ್ನಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.
ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂಬ ವಿಚಾರ ಒಂದೆಡೆಯಾದರೆ, ಮತ್ತೊಂದೆಡೆ ಲಿಂಗಾಯತರು ಸಿಎಂ ಆಗಬೇಕೆಂಬ ಕೂಗೆದ್ದಿದೆ. ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆ ಹಾಗೂ ಲಿಂಗಾಯತರು ಸಿಎಂ ಆಗಬೇಕು ಎಂಬ ಶಿವಾಚಾರ್ಯ ಶ್ರೀಗಳ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಚಲುವರಾಯಸ್ವಾಮಿ ಅವರು, ಸ್ವಾಮೀಜಿಗಳ ಹೇಳಿಕೆ ಹಿಂದೆ ವಿರೋಧ ಪಕ್ಷಗಳ ಕೈವಾಡ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಸಮಯ ಸರಿಯಿಲ್ಲ ಅನಿಸುತ್ತಿದೆ ಅಥವಾ ಯಾರದ್ದೋ ಕೈವಾಡ ಇರಬಹುದು. ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಅಭಿವೃದ್ಧಿ ಹಾಗೂ ಗ್ಯಾರಂಟಿ ಯೋಜನೆಗಳು ಜಾರಿಯಾಗುತ್ತಿವೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆದ್ದಿದ್ದ ಬಿಜೆಪಿ ಈ ಬಾರಿ ಕೇವಲ 17ರಲ್ಲಿ ಮಾತ್ರ ಗೆದ್ದಿದೆ. ಇದರಿಂದ ಅವರು ಸ್ವಲ್ಪ ಶೇಕ್ ಆಗಿದ್ದಾರೆ ಎಂದು ಕಿಡಿಕಾರಿದರು.
ಸಿಎಂ ಹಾಗೂ ಡಿಸಿಎಂ ನಡುವೆ ಹೊಂದಾಣಿಕೆ ತುಂಬಾ ಚೆನ್ನಾಗಿದೆ. ಹೈಕಮಾಂಡ್ ಅವರಿಬ್ಬರನ್ನು ಕೂರಿಸಿಕೊಂಡು ಚರ್ಚೆ ಮಾಡುತ್ತದೆ. ಹೈಕಮಾಂಡ್ ಯಾವಾಗ ತೀರ್ಮಾನ ಮಾಡಬೇಕೋ ಆಗ ಮಾಡುತ್ತೆ ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…