ಮಂಡ್ಯ

ಸಿಎಂ ಖುರ್ಚಿ ಖಾಲಿ ಇಲ್ಲ: ಸಚಿವ ಜಮೀರ್‌ ಅಹ್ಮದ್‌ ಖಾನ್

ಮಂಡ್ಯ: ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹೇಳಿದರು.

ಅವರು ಮಂಡ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿ, ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ. ಸಿಎಂ ಸ್ಥಾನ ಖಾಲಿ ಎಲ್ಲಿದೆ? ಖಾಳಿ ಇದ್ದರೆ ಚರ್ಚೆ ಸರಿ, ಆದರೆ ಖಾಲಿ ಇಲ್ಲದಿರುವಾಗ ಇದರ ಚರ್ಚೆ ಅಗತ್ಯವಿಲ್ಲ ಎಂದರು.

ಲಿಂಗಾಯತು, ಒಕ್ಕಲಿಗರು ಹಾಗೂ ದಲಿತರು ಸಿಎಂ ಸ್ಥಾನ ಕೇಳುತ್ತಾರೆ. ಅವರು ಕೇಳುವುದರಲ್ಲಿ ತಪ್ಪೇನಿದೆ. ನಮ್ಮದು ಹೈಕಮಾಂಡ್‌ ಪಕ್ಷ. ಎಲ್ಲಾವನ್ನು ಹೈಕಮಾಂಡ್‌ ತೀರ್ಮಾನ ಮಾಡಲಿದೆ. ಸ್ವಾಮೀಜಿ ಅವರ ಅಭಿಪ್ರಾಯ ಹೇಳಿದ್ದಾರೆ, ಅವರ ಅಭಿಪ್ರಾಯ ತಪ್ಪು ಅನ್ನೋಕೆ ಆಗಲ್ಲ. ಈಗಾಗಲೇ ಹೈಕಮಾಂಡ್‌ ಸಿದ್ದರಾಮಯ್ಯ ಸಿಎಂ ಎಂದು ತೀರ್ಮಾನ ಮಾಡಿ ಆಗಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೋಗಿಲು ಲೇಔಟ್‌ ಒತ್ತುವರಿ ತೆರವು: ಸತ್ಯಶೋಧನಾ ತಂಡ ರಚಿಸಿ ವಿಜಯೇಂದ್ರ ಆದೇಶ

ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್‍ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…

4 mins ago

ನನ್ನ ವಿರುದ್ಧ 17 ಕೇಸ್‌ ಇದೆ, ಇನ್ನೂ ಹಾಕೋಕೆ ಹೇಳಿ ಆದ್ರೆ ದಾರಿ ತಪ್ಪಿಸಬೇಡಿ: ಪ್ರತಾಪ್‌ ಸಿಂಹ

ಬೆಂಗಳೂರು: ನನ್ನ ವಿರುದ್ಧ 17 ಕೇಸ್‌ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…

13 mins ago

ಕುಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್‌ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್‌…

41 mins ago

ಕೇರಳ ಸಿಎಂ, ಕೆ.ಸಿ.ವೇಣುಗೋಪಾಲ್‌ ಜೊತೆ ವೇದಿಕೆ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ…

1 hour ago

ಹೊಸ ವರ್ಷಾಚರಣೆ: ಮೈಸೂರಿಗೆ ಲಗ್ಗೆಯಿಟ್ಟ ಪ್ರವಾಸಿಗರು

ಮೈಸೂರು: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೌಂಟ್‌ಡೌನ್‌ ಶುರುವಾಗಿದ್ದು, ನ್ಯೂ ಇಯರ್‌ ಆಚರಿಸಲು ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ. ಜಗತ್ಪ್ರಸಿದ್ಧ ಮೈಸೂರು ಅರಮನೆಗೆ…

1 hour ago

ವಾಲ್ಮೀಕಿ ನಿಗಮ ಹಗರಣ ಪ್ರಕರಣ: ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ

ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ಸಿಬಿಐ ಶಾಕ್‌ ನೀಡಿದ್ದು, ಬಳ್ಳಾರಿಯಲ್ಲಿ ವಿಶ್ವನಾಥ್‌…

2 hours ago