ಮಂಡ್ಯ

ಭರ್ತಿಯಾದ ಕನ್ನಂಬಾಡಿಗೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ಜಿಲ್ಲೆಯ ಜೀವನಾಡಿ ಕಾವೇರಿ ನದಿಗೆ  ಸಿಎಂ ಸಿದ್ದರಾಮಯ್ಯ ಸೋಮವಾರ (ಜು.29) ಬಾಗಿನ ಅರ್ಪಿಸಿದರು‌.

ಕೆ.ಆರ್.ಎಸ್ ಅಣೆಕಟ್ಟು ತುಂಬಿರುವ ಹಿನ್ನೆಲೆ ಸಂಪ್ರದಾಯದಂತೆ ಕಾವೇರಿ ಮಾತೆಗೆ ಬಾಗಿನ ಅರ್ಪಿಸಲಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್, ಮಂಡ್ಯ ಜಿಲ್ಲಾ ಹಾಗೂ ಕೃಷಿ ಮಂತ್ರಿ ಎನ್.ಚಲುವರಾಯಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹದೇವಪ್ಪ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಧಯಕ್ ಹಾಗೂ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ಕೆ.ಎಂ ಉದಯ್ ಸೇರಿದಂತೆ ಹಲವ ಗಣ್ಯರೊಂದಿಗೆ ಕಾವೇರಿಗೆ ಬಾಗಿನ ಅರ್ಪಿಸಿದರು.

ಮಧ್ಯಾಹ್ನ12.15 ಕ್ಕೆ ಸರಿಯಾಗಿ ಬಾಗಿನ ಅರ್ಪಿಸಲಾಯಿತು. ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಕಾವೇರಿ ನದಿಗೆ ಪೂಜೆ ಸಲ್ಲಿಸಿದರು.

ಅರ್ಚಕ ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ಬಾಗಿನ ಪೂಜಾ ಕೈಂಕರ್ಯ ನಡೆಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕೊಲ್ಲಿ ರಾಷ್ಟ್ರಗಳಲ್ಲಿ ಮುಂದುವರಿದ ಆತಂಕ

ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸಫುರಾ ಖಾನ್ ಎಂಬ ಆಟೋ ಓಡಿಸುವ ಕನಸುಗಾರ್ತಿ

೩೦ ವರ್ಷ ಪ್ರಾಯದ ಸಫುರಾ ಖಾನ್‌ರ ತಂದೆ ತಾಯಿ ಚೆನ್ನೆ ಯಿಂದ ಕರ್ನಾಟಕಕ್ಕೆ ವಲಸೆ ಬಂದಾಗ ಆಕೆ ಇನ್ನೂ ಮಗುವಾಗಿದ್ದರು.…

2 hours ago

ರಾಷ್ಟ್ರಿಯ ಹೆದ್ದಾರಿ ಅಗಲೀಕರಣ ವಿಳಂಬ: ಆರೋಪ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಗುಂಡ್ಲುಪೇಟೆಯಿಂದ ನಂಜನಗೂಡು ತನಕ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗಳನ್ನು ಅಗೆದು…

2 hours ago

ಮೂಗನಕೊಪ್ಪಲಿನಲ್ಲಿ ಮಾದರಿ ಚಾಕಿ ಸಾಕಾಣಿಕಾ ಕೇಂದ್ರ

ಮಾಮರಶಿ ರೇಷ್ಮೆ ಕೃಷಿಯಿಂದಲೇ ಉದ್ಯಮ ಕಟ್ಟಿದ ರೇಷ್ಮೆ ತ್ಯಾಗರಾಜು ೨೦೦ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ ರೈತನ ಮಗ ಮಳವಳ್ಳಿ:…

2 hours ago

ಆದಾಯದ ಹಳಿಗೆ ಮರಳಿದ ಮೃಗಾಲಯ

ಕೆ.ಬಿ.ರಮೇಶನಾಯಕ ಮೈಸೂರು: ದಕ್ಷಿಣ ಭಾರತದಲ್ಲೇ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಶ್ರೀ ಚಾಮರಾಜೇಂದ್ರ ಮೃಗಾಲಯವು ಕೋವಿಡ್ ಸಮಯದಲ್ಲಿ ಆದಾಯ ಕುಸಿತದಿಂದ ಕಂಗೆಟ್ಟರೂ…

2 hours ago

ಲೆಬನಾನಿನ ನಾಶಕ್ಕೆ ಕಾರಣವಾಗುತ್ತಿರುವ ಹೆಜ್ಬುಲ್ಲಾ ಎಂಬ ದೇವರ ಪಕ್ಷ!

ಶೇಷಾದ್ರಿ ಗಂಜೂರು ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ನಾಲ್ಕನೇ ದಿನ ಪೂರ್ಣಗೊಳಿಸಿದೆ. ಯುದ್ಧದ ಬೀಸಿಗೆ ಸಿಲುಕಿ ಮುಖ್ಯವಾಗಿ ೧೨…

2 hours ago