ಮಂಡ್ಯ

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ.

ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಇಂದು(ಡಿಸೆಂಬರ್‌.2024) ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬಳಿಕ ಹೊಂಬಾಳೆ ಅರಳಿಸಿ ಕನ್ನಡ ನುಡಿ ಅರಳಲಿ ಎಂಬ ಆಶಯದೊಂದಿಗೆ ಕಾರ್ಯಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಡಾ.ದೊಡ್ಡ ರಂಗೇಗೌಡ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ, ಸಚಿವರಾದ ಎನ್‌.ಚಲುವರಾಯಸ್ವಾಮಿ, ಡಾ.ಎಚ್‌.ಸಿ.ಮಹದೇವಪ್ಪ, ಕೆ.ಎಚ್‌.ಮುನಿಯಪ್ಪ, ಶಿವರಾಜ್‌ ತಂಗಡಗಿ, ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್‌, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿ ಕುಮಾರ್‌, ಎಂ.ಬಿ.ರಮೇಶ್‌, ಬಂಡಿ ಸಿದ್ದೇಗೌಡ, ದರ್ಶನ್‌ ಪುಟ್ಟಣ್ಣಯ್ಯ, ಕೆ.ಎಂ.ಉದಯ, ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಉಪಸ್ಥಿತರಿದ್ದರು. 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ನಾಡೋಜ ಡಾ.ಗೊ.ರ.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು.

ಅರ್ಚನ ಎಸ್‌ ಎಸ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

6 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

7 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

7 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

8 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

8 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

8 hours ago