ಮಂಡ್ಯ

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ದಾರೆ.

ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಇಂದು(ಡಿಸೆಂಬರ್‌.2024) ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಧಿಕೃತವಾಗಿ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಬಳಿಕ ಹೊಂಬಾಳೆ ಅರಳಿಸಿ ಕನ್ನಡ ನುಡಿ ಅರಳಲಿ ಎಂಬ ಆಶಯದೊಂದಿಗೆ ಕಾರ್ಯಕಾರ್ಯಕ್ಕೆ ಚಾಲನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಡಾ.ದೊಡ್ಡ ರಂಗೇಗೌಡ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ, ಸಚಿವರಾದ ಎನ್‌.ಚಲುವರಾಯಸ್ವಾಮಿ, ಡಾ.ಎಚ್‌.ಸಿ.ಮಹದೇವಪ್ಪ, ಕೆ.ಎಚ್‌.ಮುನಿಯಪ್ಪ, ಶಿವರಾಜ್‌ ತಂಗಡಗಿ, ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್‌, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿ ಕುಮಾರ್‌, ಎಂ.ಬಿ.ರಮೇಶ್‌, ಬಂಡಿ ಸಿದ್ದೇಗೌಡ, ದರ್ಶನ್‌ ಪುಟ್ಟಣ್ಣಯ್ಯ, ಕೆ.ಎಂ.ಉದಯ, ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಉಪಸ್ಥಿತರಿದ್ದರು. 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ನಾಡೋಜ ಡಾ.ಗೊ.ರ.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು.

ಅರ್ಚನ ಎಸ್‌ ಎಸ್

Recent Posts

ಮಂಡ್ಯ | ಶೂಟೌಟ್‌ ಪ್ರಕರಣ ; 7 ಆರೋಪಿಗಳ ಬಂಧನ

ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಇಚ್ಛಾಶಕ್ತಿ ಇದ್ದರೆ , ಕನ್ನಡ ಚಿತ್ರೋದ್ಯಮದ ಕಾಯಕಲ್ಪಕ್ಕಿದು ಸಕಾಲ

ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

12 hours ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

1 day ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

1 day ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

1 day ago