ಮಂಡ್ಯ

ನಾಲೆಗಳಿಗೆ ತಕ್ಷಣದಿಂದಲೇ ನೀರು ಹರಿಸಲು ಸಿಎಂ ಆದೇಶ

ಕೆಆರ್‌ಎಸ್: ರಾಜ್ಯದ ಎಲ್ಲಾ ಜಲಾಶಯಗಳು ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಆದೇಶ ನೀಡಿದ್ದಾರೆ.

ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನನ್ನ ಕಾಲ್ಗುಣ ಚನ್ನಾಗಿಲ್ಲ ಎಂದಿದ್ದರು; ಕೃಷ್ಣರಾಜಸಾಗರದ ಒಟ್ಟು ೧೨೪.೮೦ ಅಡಿ ಸಾಮರ್ಥ್ಯದಲ್ಲಿ ೧೨೪ ಅಡಿ ಭರ್ತಿ ಆಗಿದೆ. ಅಣೆಕಟ್ಟೆಗೆ ೪೯ ಟಿಎಂಸಿ ನೀರಿನ ಸಾಮರ್ಥ್ಯವಿದೆ. ೯೩ ವರ್ಷಗಳಲ್ಲಿ ೭೬ ಬಾರಿ ಭರ್ತಿಯಾಗಿದೆ. ೨೦೨೩-೨೪ ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೇ ‘ಸಿದ್ದರಾಮಯ್ಯ ಅವರ ಕಾಲ್ಗುಣ ಚನ್ನಾಗಿಲ್ಲ, ಕಾಂಗ್ರೆಸ್ ಸರ್ಕಾರದ ಕಾಲ್ಗುಣ ಸರಿಯಿಲ್ಲ‘ ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದು ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ವಿರೋಧ ಪಕ್ಷಗಳು ಮೂಡಾತ್ಮರು ಈಗ ಏನು ಹೇಳ್ತಾರೆ ಎಂದು ಸಿಎಂ ವ್ಯಂಗ್ಯವಾಡಿದರು.

ಅಭಿವೃದ್ಧಿಗೆ ಹಣ ಇಲ್ಲ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬುರುಡೆ ಬಿಡುತ್ತಿರುವ ಬಿಜೆಪಿಯವರು ನಾಡಿನ ಜನರಿಗೆ ಉತ್ತರಿಸಬೇಕು. ದಿವಾಳಿ ಆಗಿದ್ದರೆ ೨೫ ಸಾವಿರ ಕೋಟಿ ರೂಪಾಯಿ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು. ಕೃಷಿ ಪ್ರಗತಿಗಾಗಿ ವರ್ಷಕ್ಕೆ ೧೯,೦೦೦ ಸಾವಿರ ಕೋಟಿ ರೂ. ಪಂಪ್ ಸೆಟ್ ಸಬ್ಸಿಡಿಯನ್ನು ರೈತರಿಗೆ ಕೊಟ್ಟಿದ್ದೇವೆ. ೯೩ ವರ್ಷಗಳ ಬಳಿಕ ಜೂನ್ ತಿಂಗಳಲ್ಲೇ ಭರ್ತಿ ಆಗಿರುವ ಕೆಅರ್‌ಎಸ್‌ನಲ್ಲಿ ಸ್ಮಾರಕ ನಿರ್ಮಿಸಿ ಎಂದು ಕಾವೇರಿ ನಿಗಮದ ಎಂಡಿ ಅವರಿಗೆ ಸಿಎಂ ಸೂಚನೆ ನೀಡಿದರು.

ನಾವು ಅಧಿಕಾರದಲ್ಲಿದ್ದಾಗ ಯಾವಾಗಲಾದರೂ ರೈತರಿಗೆ ಬಿತ್ತನೆ ಬೀಜ, ಗೊಬ್ಬರಕ್ಕೆ ತೊಂಧರೆ ಮಾಡಿದ್ದೇವಾ? ಬಿತ್ತನೆ ಬೀಜ ಕೇಳಿದವರಿಗೆ ಗೋಲಿಬಾರ್ ಮಾಡಿದ್ದೇವಾ ಎಂದು ಪ್ರಶ್ನಿಸುವ ಮೂಲಕ ಬಿಜೆಪಿಗೆ ಸಿದ್ದರಾಮಯ್ಯ ಚಾಟಿ ಬೀಸಿದರು. ನಾವು ಈ ಬಾರಿ ಕಾವೇರಿ ಅಭಿವೃದ್ಧಿ ನಿಗಮಕ್ಕೆ ೩,೦೦೦ ಕೋಟಿ ರೂ. ಹಣ ಕೊಟ್ಟಿದ್ದೇವೆ. ಈಗ ಟೀಕಿಸುತ್ತಿರುವವರು ಅಧಿಕಾರದಲ್ಲಿದ್ದಾಗ ಕಾವೇರಿ ನಿಗಮಕ್ಕೆ ಹಣ ಕೊಡಲಿಲ್ಲ ಎಂದು ಟೀಕಿಸಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago