ಮಂಡ್ಯ

ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ

ಮಂಡ್ಯ: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ. ಮನುಷ್ಯ ಮನುಷ್ಯ ಪ್ರೀತಿಸಬೇಕು. ಸಹಿಷ್ಣತೆ ಇರಬೇಕು ಎಂದರು.

ಸಮಾಜದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಬೇರೆ ಬೇರೆ ನಂಬಿಕೆಗಳಿರುತ್ತವೆ. ಒಬ್ಬರ ನಂಬಿಕೆ ಬಗ್ಗೆ ಉಳಿದವರೆಲ್ಲರಿಗೂ ಗೌರವ ಇರಬೇಕು. ಪರಸ್ಪರ ಗೌರವಗಳಿಂದ ಎಲ್ಲರ ನಂಬಿಕೆಗಳನ್ನು ಕಾಣಬೇಕು ಎಂದು‌ ಕರೆ ನೀಡಿದರು.

ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ಎಲ್ಲರ ನಂಬಿಕೆಗಳ ಆಚರಣೆಗೆ ಅವಕಾಶ ಇದೆ. ಸಂವಿಧಾನ ಕೊಟ್ಟ ಅವಕಾಶದಿಂದ ನಾನು ಶಿಕ್ಷಣ ಪಡೆದು ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದಾರೆ. ಅದ್ದರಿಂದ ಪ್ರತಿಯೊಬ್ಬರೂ ಇದನ್ನು ಪಾಲಿಸಬೇಕು ಎಂದರು.

ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲ. ಆರ್ಥಿಕ ಶಕ್ತಿ ಬಂದಾಗ, ಸಾಮಾಜಿಕ ಶಕ್ತಿ ಬಂದಾಗ ಚಲನೆ ಸಿಗುತ್ತದೆ ಎಂದರು.

ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸವನ್ನು ಸುರಿಯುತ್ತಿದ್ದರು. ಸಂವಿಧಾನದ ಕಾರಣದಿಂದ ಇಂಥಾ ಸ್ಥಿತಿ ಹೋಗಿ ನಮಗೆಲ್ಲಾ ಶಿಕ್ಷಣ ಸಿಕ್ಕಿದೆ ಎಂದರು.

ಆಂದೋಲನ ಡೆಸ್ಕ್

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

2 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

7 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

7 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

7 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

18 hours ago