ಮಂಡ್ಯ

ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ

ಮಂಡ್ಯ: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ. ಮನುಷ್ಯ ಮನುಷ್ಯ ಪ್ರೀತಿಸಬೇಕು. ಸಹಿಷ್ಣತೆ ಇರಬೇಕು ಎಂದರು.

ಸಮಾಜದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಬೇರೆ ಬೇರೆ ನಂಬಿಕೆಗಳಿರುತ್ತವೆ. ಒಬ್ಬರ ನಂಬಿಕೆ ಬಗ್ಗೆ ಉಳಿದವರೆಲ್ಲರಿಗೂ ಗೌರವ ಇರಬೇಕು. ಪರಸ್ಪರ ಗೌರವಗಳಿಂದ ಎಲ್ಲರ ನಂಬಿಕೆಗಳನ್ನು ಕಾಣಬೇಕು ಎಂದು‌ ಕರೆ ನೀಡಿದರು.

ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ಎಲ್ಲರ ನಂಬಿಕೆಗಳ ಆಚರಣೆಗೆ ಅವಕಾಶ ಇದೆ. ಸಂವಿಧಾನ ಕೊಟ್ಟ ಅವಕಾಶದಿಂದ ನಾನು ಶಿಕ್ಷಣ ಪಡೆದು ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದಾರೆ. ಅದ್ದರಿಂದ ಪ್ರತಿಯೊಬ್ಬರೂ ಇದನ್ನು ಪಾಲಿಸಬೇಕು ಎಂದರು.

ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲ. ಆರ್ಥಿಕ ಶಕ್ತಿ ಬಂದಾಗ, ಸಾಮಾಜಿಕ ಶಕ್ತಿ ಬಂದಾಗ ಚಲನೆ ಸಿಗುತ್ತದೆ ಎಂದರು.

ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸವನ್ನು ಸುರಿಯುತ್ತಿದ್ದರು. ಸಂವಿಧಾನದ ಕಾರಣದಿಂದ ಇಂಥಾ ಸ್ಥಿತಿ ಹೋಗಿ ನಮಗೆಲ್ಲಾ ಶಿಕ್ಷಣ ಸಿಕ್ಕಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

7 mins ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

47 mins ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

49 mins ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

53 mins ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

56 mins ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

4 hours ago