cm siddaramaiah mandya
ಮಂಡ್ಯ: ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ. ಮನುಷ್ಯ ಮನುಷ್ಯ ಪ್ರೀತಿಸಬೇಕು. ಸಹಿಷ್ಣತೆ ಇರಬೇಕು ಎಂದರು.
ಸಮಾಜದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಬೇರೆ ಬೇರೆ ನಂಬಿಕೆಗಳಿರುತ್ತವೆ. ಒಬ್ಬರ ನಂಬಿಕೆ ಬಗ್ಗೆ ಉಳಿದವರೆಲ್ಲರಿಗೂ ಗೌರವ ಇರಬೇಕು. ಪರಸ್ಪರ ಗೌರವಗಳಿಂದ ಎಲ್ಲರ ನಂಬಿಕೆಗಳನ್ನು ಕಾಣಬೇಕು ಎಂದು ಕರೆ ನೀಡಿದರು.
ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ಎಲ್ಲರ ನಂಬಿಕೆಗಳ ಆಚರಣೆಗೆ ಅವಕಾಶ ಇದೆ. ಸಂವಿಧಾನ ಕೊಟ್ಟ ಅವಕಾಶದಿಂದ ನಾನು ಶಿಕ್ಷಣ ಪಡೆದು ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದಾರೆ. ಅದ್ದರಿಂದ ಪ್ರತಿಯೊಬ್ಬರೂ ಇದನ್ನು ಪಾಲಿಸಬೇಕು ಎಂದರು.
ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲ. ಆರ್ಥಿಕ ಶಕ್ತಿ ಬಂದಾಗ, ಸಾಮಾಜಿಕ ಶಕ್ತಿ ಬಂದಾಗ ಚಲನೆ ಸಿಗುತ್ತದೆ ಎಂದರು.
ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸವನ್ನು ಸುರಿಯುತ್ತಿದ್ದರು. ಸಂವಿಧಾನದ ಕಾರಣದಿಂದ ಇಂಥಾ ಸ್ಥಿತಿ ಹೋಗಿ ನಮಗೆಲ್ಲಾ ಶಿಕ್ಷಣ ಸಿಕ್ಕಿದೆ ಎಂದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…