CM Siddaramaiah to visit Maddur on July 28
ಮದ್ದೂರು : ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಆದೇಶಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು. ಕುಡಿಯುವ ನೀರನ್ನು ಪರಿಶೀಲನೆಗೆ ಒಳಪಡಿಸಿ ಎಂದರು.
ಸಾರ್ವಜನಿಕರಿಗೆ ನೀಡಲಾಗುವ ಊಟ ತಯಾರಿಕೆ ಸ್ಥಳದಲ್ಲಿ ಹಾಗೂ ವೇದಿಕೆಯ ಬಳಿ ಆಹಾರ ಸುರಕ್ಷತಾ ಅಧಿಕಾರಿಗಳನ್ನು ನಿಯೋಜಿಸಿ ಆಹಾರವನ್ನು ಪರಿಶೀಲನೆಗೆ ಒಳಪಡಿಸಿ. ಸುತ್ತಮುತ್ತಲೂ ಸ್ವಚ್ಛತೆಯನ್ನು ಕಪಾಡಲು ಪೌರಕಾರ್ಮಿಕರನ್ನು ನಿಯೋಜಿಸಿ ನಿಗಾ ವಹಿಸಿ ಎಂದರು.
ಆಹಾರ ವಿತರಣೆ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದಂತೆ 60 ಕೌಂಟರ್ ಗಳನ್ನು ತೆರೆಯಿರಿ ಯಾವುದೇ ನೂಕು ನುಗ್ಗಲು ಉಂಟಾಗದಂತೆ ಸಿಬ್ಬಂದಿಗಳನ್ನು ನಿಯೋಜಿಸಿ ಆಹಾರ ವಿತರಣೆ ಮಾಡಿ ಎಂದರು.
ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟಿನೆ ಹಾಗೂ ಶಂಕುಸ್ಥಾಪನೆ ನಡೆಯಲಿದೆ. ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಸಚಿವರು, ಶಾಸಕರು, ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳಿಗೆ ತಲುಪಿಸಿ ಎಂದರು.
1168.37 ಕೋಟಿ ರೂ ವೆಚ್ಚದ 88 ಕಾಮಗಾರಿಗಳ ಉದ್ಘಾಟನೆ/ ಶಿಲಾನ್ಯಾಸ: ಲೋಕೋಯೋಗಿ ಇಲಾಖೆಯ- 81.29 ಕೋಟಿ ರೂ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ- 12.15 ಕೋಟಿ ರೂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ-8 ಕೋಟಿ ರೂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ- 257.18 ಕೋಟಿ ರೂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ- 2.45 ಕೋಟಿ ರೂ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ-16.49 ಕೋಟಿ ರೂ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪ ವಿಭಾಗ ರೂ 47.28 ಕೋಟಿ. ಕಾವೇರಿ ನೀರಾವರಿ ನಿಗಮ ರೂ 484.33 ಕೋಟಿ. ಮದ್ದೂರು ಪುರಸಭೆ ರೂ 5.25 ಕೋಟಿ. ಸಮಾಜ ಕಲ್ಯಾಣ ಇಲಾಖೆ ರೂ 23 ಕೋಟಿ. ಮಂಡ್ಯ ವಿಶ್ವವಿದ್ಯಾನಿಲಯ 8.50 ಕೋಟಿ ರೂ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 187 ಕೋಟಿ ರೂ, ಕೃಷಿ ಇಲಾಖೆ 2 ಕೋಟಿ ರೂ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 1.80 ಕೋಟಿ ರೂ, ತೋಟಗಾರಿಕೆ ಇಲಾಖೆ 21.65 ಕೋಟಿ ರೂ ಅನುದಾನದ ಕಾಮಗಾರಿಗಳ ಶಂಕುಸ್ಥಾಪನೆ/ ಉದ್ಘಾಟನೆ ನೆರವೇರಲಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಕುಮಾರ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…
ಟೆಹರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…