ಮಂಡ್ಯ

ಜುಲೈ 28 ರಂದು ಮದ್ದೂರಿಗೆ ಸಿಎಂ ಭೇಟಿ : ಕಾಮಗಾರಿಗಳ ಉದ್ಘಾಟನೆ

ಮದ್ದೂರು : ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ‌ ಆದೇಶಿಸಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು. ಕುಡಿಯುವ ನೀರನ್ನು ಪರಿಶೀಲನೆಗೆ ಒಳಪಡಿಸಿ ಎಂದರು.

ಸಾರ್ವಜನಿಕರಿಗೆ ನೀಡಲಾಗುವ ಊಟ ತಯಾರಿಕೆ ಸ್ಥಳದಲ್ಲಿ ಹಾಗೂ ವೇದಿಕೆಯ ಬಳಿ‌ ಆಹಾರ ಸುರಕ್ಷತಾ ಅಧಿಕಾರಿಗಳನ್ನು ನಿಯೋಜಿಸಿ ಆಹಾರವನ್ನು‌ ಪರಿಶೀಲನೆಗೆ ಒಳಪಡಿಸಿ. ಸುತ್ತಮುತ್ತಲೂ ಸ್ವಚ್ಛತೆಯನ್ನು ಕಪಾಡಲು ಪೌರಕಾರ್ಮಿಕರನ್ನು ನಿಯೋಜಿಸಿ ನಿಗಾ ವಹಿಸಿ ಎಂದರು.

ಆಹಾರ ವಿತರಣೆ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದಂತೆ 60 ಕೌಂಟರ್ ಗಳನ್ನು ತೆರೆಯಿರಿ ಯಾವುದೇ ನೂಕು ನುಗ್ಗಲು ಉಂಟಾಗದಂತೆ ಸಿಬ್ಬಂದಿಗಳನ್ನು ನಿಯೋಜಿಸಿ ಆಹಾರ ವಿತರಣೆ ಮಾಡಿ ಎಂದರು.

ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟಿನೆ ಹಾಗೂ ಶಂಕುಸ್ಥಾಪನೆ ನಡೆಯಲಿದೆ. ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಸಚಿವರು, ಶಾಸಕರು, ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳಿಗೆ ತಲುಪಿಸಿ ಎಂದರು.

1168.37 ಕೋಟಿ ರೂ ವೆಚ್ಚದ 88 ಕಾಮಗಾರಿಗಳ ಉದ್ಘಾಟನೆ/ ಶಿಲಾನ್ಯಾಸ: ಲೋಕೋಯೋಗಿ ಇಲಾಖೆಯ- 81.29 ಕೋಟಿ ರೂ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ- 12.15 ಕೋಟಿ ರೂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ-8 ಕೋಟಿ ರೂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ- 257.18 ಕೋಟಿ ರೂ, ಆರೋಗ್ಯ‌ ಮತ್ತು ಕುಟುಂಬ ಕಲ್ಯಾಣ ಇಲಾಖೆ- 2.45 ಕೋಟಿ ರೂ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ-16.49 ಕೋಟಿ ರೂ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪ ವಿಭಾಗ ರೂ 47.28 ಕೋಟಿ. ಕಾವೇರಿ ನೀರಾವರಿ ನಿಗಮ ರೂ 484.33 ಕೋಟಿ. ಮದ್ದೂರು ಪುರಸಭೆ ರೂ 5.25 ಕೋಟಿ. ಸಮಾಜ ಕಲ್ಯಾಣ ಇಲಾಖೆ ರೂ 23 ಕೋಟಿ. ಮಂಡ್ಯ ವಿಶ್ವವಿದ್ಯಾನಿಲಯ 8.50 ಕೋಟಿ ರೂ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 187 ಕೋಟಿ ರೂ, ಕೃಷಿ ಇಲಾಖೆ 2 ಕೋಟಿ ರೂ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 1.80 ಕೋಟಿ ರೂ, ತೋಟಗಾರಿಕೆ ಇಲಾಖೆ 21.65 ಕೋಟಿ ರೂ ಅನುದಾನದ ಕಾಮಗಾರಿಗಳ ಶಂಕುಸ್ಥಾಪನೆ/ ಉದ್ಘಾಟನೆ ನೆರವೇರಲಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಕುಮಾರ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಅರಮನೆ ಬಳಿ ಹೀಲಿಯಂ ಸ್ಫೋಟ ಪ್ರಕರಣ: ಎನ್‌ಐಎ ತನಿಖೆಗೆ ಪ್ರಮೋದ್‌ ಮುತಾಲಿಕ್‌ ಆಗ್ರಹ

ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್‌ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಪ್ರತಿಕ್ರಿಯೆ ನೀಡಿದ್ದು,…

46 mins ago

ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ನ್ಯಾಯಾಲಯದ ಆದೇಶವನ್ನು ಮೀರಿ…

1 hour ago

ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರ ಲಗ್ಗೆ: ಪ್ರಕೃತಿ ಸೌಂದರ್ಯಕ್ಕೆ ಮನಸೋತ ಜನತೆ

ಹನೂರು: ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಬರುತ್ತಿದ್ದು, ಇಂದು…

1 hour ago

ಕಾಡುಹಂದಿ ಬೇಟೆಗಾಗಿ ಮನೆಯಲ್ಲಿ ಸಂಗ್ರಹಿಸಿದ್ದ ಸಿಡಿಮದ್ದು ಸಿಡಿದು ವ್ಯಕ್ತಿಗೆ ಗಂಭೀರ ಗಾಯ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದಲ್ಲಿ ಸಿಡಿಮದ್ದು ಸಿಡಿದು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಡಿಮದ್ದು ಸಿಡಿದು ಪೆದ್ದಿ ಅಲಿಯಾಸ್‌…

2 hours ago

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು…

2 hours ago

ಓದುಗರ ಪತ್ರ:  ಗಂಗೋತ್ರಿ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಬೇಕಿದೆ

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ…

2 hours ago