CM Siddaramaiah to visit Maddur on July 28
ಮದ್ದೂರು : ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಆದೇಶಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು. ಕುಡಿಯುವ ನೀರನ್ನು ಪರಿಶೀಲನೆಗೆ ಒಳಪಡಿಸಿ ಎಂದರು.
ಸಾರ್ವಜನಿಕರಿಗೆ ನೀಡಲಾಗುವ ಊಟ ತಯಾರಿಕೆ ಸ್ಥಳದಲ್ಲಿ ಹಾಗೂ ವೇದಿಕೆಯ ಬಳಿ ಆಹಾರ ಸುರಕ್ಷತಾ ಅಧಿಕಾರಿಗಳನ್ನು ನಿಯೋಜಿಸಿ ಆಹಾರವನ್ನು ಪರಿಶೀಲನೆಗೆ ಒಳಪಡಿಸಿ. ಸುತ್ತಮುತ್ತಲೂ ಸ್ವಚ್ಛತೆಯನ್ನು ಕಪಾಡಲು ಪೌರಕಾರ್ಮಿಕರನ್ನು ನಿಯೋಜಿಸಿ ನಿಗಾ ವಹಿಸಿ ಎಂದರು.
ಆಹಾರ ವಿತರಣೆ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದಂತೆ 60 ಕೌಂಟರ್ ಗಳನ್ನು ತೆರೆಯಿರಿ ಯಾವುದೇ ನೂಕು ನುಗ್ಗಲು ಉಂಟಾಗದಂತೆ ಸಿಬ್ಬಂದಿಗಳನ್ನು ನಿಯೋಜಿಸಿ ಆಹಾರ ವಿತರಣೆ ಮಾಡಿ ಎಂದರು.
ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟಿನೆ ಹಾಗೂ ಶಂಕುಸ್ಥಾಪನೆ ನಡೆಯಲಿದೆ. ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಸಚಿವರು, ಶಾಸಕರು, ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳಿಗೆ ತಲುಪಿಸಿ ಎಂದರು.
1168.37 ಕೋಟಿ ರೂ ವೆಚ್ಚದ 88 ಕಾಮಗಾರಿಗಳ ಉದ್ಘಾಟನೆ/ ಶಿಲಾನ್ಯಾಸ: ಲೋಕೋಯೋಗಿ ಇಲಾಖೆಯ- 81.29 ಕೋಟಿ ರೂ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ- 12.15 ಕೋಟಿ ರೂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ-8 ಕೋಟಿ ರೂ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ- 257.18 ಕೋಟಿ ರೂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ- 2.45 ಕೋಟಿ ರೂ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ-16.49 ಕೋಟಿ ರೂ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪ ವಿಭಾಗ ರೂ 47.28 ಕೋಟಿ. ಕಾವೇರಿ ನೀರಾವರಿ ನಿಗಮ ರೂ 484.33 ಕೋಟಿ. ಮದ್ದೂರು ಪುರಸಭೆ ರೂ 5.25 ಕೋಟಿ. ಸಮಾಜ ಕಲ್ಯಾಣ ಇಲಾಖೆ ರೂ 23 ಕೋಟಿ. ಮಂಡ್ಯ ವಿಶ್ವವಿದ್ಯಾನಿಲಯ 8.50 ಕೋಟಿ ರೂ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 187 ಕೋಟಿ ರೂ, ಕೃಷಿ ಇಲಾಖೆ 2 ಕೋಟಿ ರೂ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 1.80 ಕೋಟಿ ರೂ, ತೋಟಗಾರಿಕೆ ಇಲಾಖೆ 21.65 ಕೋಟಿ ರೂ ಅನುದಾನದ ಕಾಮಗಾರಿಗಳ ಶಂಕುಸ್ಥಾಪನೆ/ ಉದ್ಘಾಟನೆ ನೆರವೇರಲಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಕುಮಾರ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…