Categories: ಮಂಡ್ಯ

ಸಹಕಾರ ಸಂಘಗಳು ರಾಜಕೀಯದಿಂದ ಮುಕ್ತವಾಗಬೇಕು: ಚಲುವರಾಯಸ್ವಾಮಿ ಅಭಿಮತ

ಮಂಡ್ಯ: ಸಹಕಾರ ಸಂಘಗಳು ರಾಜಕೀಯದಿಂದ ಮುಕ್ತವಾಗಿ ರೈತರ ಸಮಗ್ರವಾದ ಅಭಿವೃದ್ಧಿಯನ್ನು ಮುಖ್ಯ ಗುರಿಯನ್ನಾಗಿಸಿಕೊಂಡು ಕೆಲಸ ಮಾಡುವ ಮೂಲಕ ರೈತರ ಮಿತ್ರನಂತೆ ಸಹಕಾರ ಸಂಘಗಳನ್ನು ಮುನ್ನಡೆಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಹೇಳಿದರು.

ಅವರು ಕೃಷ್ಣರಾಜಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 75ನೇ ವರ್ಷದ ವಜ್ರಮಹೋತ್ಸವ ಹಾಗೂ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ಸೇರಿದಂತೆ ಭಾರತ ದೇಶಾದ್ಯಂತ ಸಹಕಾರ ಚಳುವಳಿಯು ವಿಸ್ತರಿಸಿದೆ. ರೈತರ ಬಂಧುವಿನಂತೆ, ರೈತರ ಮಿತ್ರನಂತೆ ಕಾರ್ಯನಿರ್ವಹಿಸುತ್ತಿರುವ ಸಹಕಾರ ಸಂಘಗಳು ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯವಾಗಿ ಬೇಕಾದ ಬಿತ್ತನೆ ಬೀಜಗಳು, ರಾಸಾಯನಿಕ ಗೊಬ್ಬರಗಳು ಹಾಗೂ ಔಷಧಿಗಳನ್ನು ರಿಯಾಯಿತಿ ದರದಲ್ಲಿ ಸಕಾಲಕ್ಕೆ ನೀಡಿ ಕೃಷಿ ಚಟುವಟಿಕೆಗಳನ್ನು ಉತ್ತೇಜಿಸಲು ಸಹಕರಿಸಲಿದೆ ಎಂದು ಹೇಳಿದರು.

ರಾಜ್ಯ ಸರ್ಕಾರವು ರೈತನು ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಸರಬರಾಜು ಮಾಡುವ ಪ್ರತೀ ಲೀಟರ್ ಹಾಲಿಗೆ 5 ರೂ ಸಹಾಯ ಧನವನ್ನು ನೀಡುವ ಜೊತೆಗೆ 5ಲಕ್ಷ ರೂಪಾಯಿಗಳವರೆಗೆ ರೈತರು ಬೇಸಾಯ ನಡೆಸಲು ಶೂನ್ಯ ಬಡ್ಡಿಯಲ್ಲಿ ಬಡ್ಡಿ ರಹಿತವಾದ ಸಾಲ ಸೌಲಭ್ಯವನ್ನು ನೀಡಿ ರೈತರಿಗೆ ಆಸರೆಯಾಗುವ ಜೊತೆ ಜೊತೆಗೆ ಕೃಷಿ ಚಟುವಟಿಕೆ ನಡೆಸಲು ಬೇಕಾದ ಮಾರ್ಗದರ್ಶನ ಹಾಗೂ ಉತ್ತೇಜನ ನೀಡಿ ರೈತರು ನೆಮ್ಮದಿಯಾಗಿ ಬೇಸಾಯ ನಡೆಸಿ ಆರ್ಥಿಕವಾಗಿ ಸ್ವಾವಲಂಭನೆ ಸಾಧಿಸಿ ಸಾಲದ ಬಾಧೆಯಿಂದ ಹೊರಬರಲು ಸದೃಡವಾಗಿ ನಿಂತು ಸಹಕಾರ ಹಸ್ತವನ್ನು ಚಾಚಿದೆ. ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮಂಡ್ಯ ಜಿಲ್ಲೆಯ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 1038 ಕೋಟಿ ರೂಪಾಯಿ ಸಾಲ ಸೌಲಭ್ಯವನ್ನು ನೀಡಿದೆ ಎಂದು ಅಭಿಮಾನದಿಂದ ಹೇಳಿದರು.

ರಾಜ್ಯದಲ್ಲಿ ಈ ಭಾರಿ ಉತ್ತಮವಾದ ಮಳೆಯಾಗಿದ್ದು ರೈತರು ನೆಮ್ಮದಿಯಿಂದ ಕೃಷಿ ಚಟುವಟಿಕೆಗಳನ್ನು ನಡೆಸಿದ್ದಾರೆ. ಉತ್ತಮವಾದ ಮಳೆಯಾಗಿ ಕೆರೆ-ಕಟ್ಟೆಗಳು ಹಾಗೂ ಜಲಾಶಯಗಳು ತುಂಬಿ ತುಳುಕುತ್ತಿದ್ದು ಸಮೃದ್ಧವಾದ ಫಸಲು ಬೆಳೆದು ಉತ್ತಮವಾಗಿ ಇಳುವರಿ ಪಡೆದಿರುವ ರೈತರು ಬೇಸಾಯ ಚಟುವಟಿಕೆಯನ್ನು ನಡೆಸಲು ಅಗತ್ಯವಾಗಿ ಬೇಕಾದ ಬಿತ್ತನೆ ಬೀಜಗಳು ಹಾಗೂ ರಸ ಗೊಬ್ಬರವನ್ನು ಸರಬರಾಜು ಮಾಡಿಸಿ ರಾಜ್ಯದ ಕೃಷಿ ಸಚಿವನಾಗಿ ರೈತರಿಗೆ ಯಾವುದೇ ತೊಂದರೆಯಾಗದಂತೆ ಕೆಲಸ ಮಾಡಿರುವ ಆತ್ಮವಿಶ್ವಾಸ ನನಗೆ ಇದೆ. ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗೆ ಬದ್ಧತೆಯಿಂದ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ಶಾಸಕ ಮಂಜು ವಹಿಸಿದ್ದರು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಕಾಡೇನಹಳ್ಳಿ ರಾಮಚಂದ್ರ, ಅಕ್ಕಿಹೆಬ್ಬಾಳು ಕೃಷಿ ಪತ್ತಿನ ಸಹಕರ ಸಂಘದ ಅಧ್ಯಕ್ಷ ಎಸ್.ಆರ್.ನವೀನ್‌ಕುಮಾರ್, ಮೈಸೂರು ಮಹರಾಣಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಸುರೇಶ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಮೈಷುಗರ್ ಅಧ್ಯಕ್ಷರಾದ ಸಿ.ಡಿ.ಗಂಗಾಧರ, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಅಕ್ಕಿಹೆಬ್ಬಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಹರೀಶ್, ಜಿಲ್ಲಾ ಪಂಚಾಯಿತಿ ಮಾಜಿಸದಸ್ಯರಾದ ಕೊಡಗಹಳ್ಳಿ ಮಂಜೇಗೌಡ, ಬಿ.ನಾಗೇಂದ್ರಕುಮಾರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್.ಕೆ.ಅಶೋಕ್, ಡಿಸಿಸಿ ಬ್ಯಾಂಕ್ ಪ್ರಧಾನವ್ಯವಸ್ಥಾಪಕಿ ಆರ್.ಜೆ.ರೂಪಶ್ರೀ, ಶಶಿಧರ್ ಸಂಗಾಪುರ, ರಾಜನಾಯಕ, ಎ.ಎಂ.ಸಂಜೀವಪ್ಪ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕಿ ಪ್ರಮೋಧ, ಮೇಲ್ವಿಚಾರಕ ಆದಿಲ್‌ಪಾಶ ಸೇರಿದಂತೆ ನೂರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

20 mins ago

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

4 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

4 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

4 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

4 hours ago