ಮಂಡ್ಯ

ಗಗನಚುಕ್ಕಿ ಜಲಪಾತೋತ್ಸವಕ್ಕೆ ವರ್ಣರಂಚಿತ ತೆರೆ

ಮಳವಳ್ಳಿ : 2 ದಿನಗಳ ಕಾಲ ನಡೆದ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮಕ್ಕೆ ವರ್ಣರಂಜಿತ ತೆರೆ ಬಿದಿದ್ದು, ಇದರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಂಡವು.

ಭಾನುವಾರ ರಜೆ ಹಿನ್ನೆಲ್ಲೆಯಲ್ಲಿ ಬೆಂಗಳೂರು, ಮೈಸೂರು, ಚಾಮರಾಜನಗರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಿಂದ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನಿರೀಕ್ಷೆಗೂ ಮೀರಿ ಬಂದಿದ್ದ ಸಾವಿರಾರು ಪ್ರವಾಸಿಗರು ಪರಿಸರ ಹಾಗೂ ಸಾಂಸ್ಕೃತಿಕ ರಸದೌತಣವನ್ನು ಸವಿದರು.

ಹಾಲಿನ ನೊರೆಯಂತೆ ದುಮ್ಮಿಕ್ಕಿ ಹರಿಯುವ ಜಲಸಿರಿ ಹಾಗೂ ವಿವಿಧ ಬಣ್ಣದ ಚಿತ್ತಾರದ ನಡುವೆ ಹಮ್ಮಿಕೊಳ್ಳಲಾಗಿದ್ದ ಲೇಸರ್ ಶೋ ಪ್ರವಾಸಿಗರ ಮನಸೂರೆಗೊಂಡಿತು. ಭಾನುವಾರ ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೩ ಗಂಟೆವರೆಗೆ ಜಿಲ್ಲೆಯ ವಿವಿಧ ಕಲಾವಿದರ ಪ್ರದರ್ಶನ ಗಮನ ಸೆಳೆಯಿತು. ಖ್ಯಾತ ಜಾನಪದ ಗಾಯಕ ಮಳವಳ್ಳಿ ಮಹದೇವಸ್ವಾಮಿ ಅವರ ಗಾಯನ ಜನರ ಮನ ಸೆಳೆಯಿತು.

ನಂತರ ಜಾನಪದ ಕಲಾವಿದರಾದ ಸವಿತಕ್ಕ, ಹರ್ಷ, ಕಂಬದ ರಂಗಯ್ಯ ಹಾಗೂ ಮಲ್ಲಿಕಾರ್ಜುನ ಕೆಂಕೆರೆ ಕಾರ್ಯಕ್ರಮ ನಡೆಸಿದರು. ತಾಲ್ಲೂಕಿನ ಹಲಗೂರು, ಕಿರುಗಾವಲು, ಬಿ.ಜಿ.ಪುರ, ಮಳವಳ್ಳಿ ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಿಗೆ ನೂರಾರು ಬಸ್‌ಗಳ ಮೂಲಕ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ಡಿವೈಎಸ್‌ಪಿ ವಿ.ಕೃಷ್ಣಪ್ಪ ನೇತೃತ್ವದಲ್ಲಿ ನೂರಾರು ಪೊಲೀಸರು ಭದ್ರತೆ ಕಲ್ಪಿಸಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

3 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

4 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

5 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

6 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

11 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

13 hours ago