ಮಂಡ್ಯ

ಗಗನಚುಕ್ಕಿ ಜಲಪಾತೋತ್ಸವಕ್ಕೆ ವರ್ಣರಂಚಿತ ತೆರೆ

ಮಳವಳ್ಳಿ : 2 ದಿನಗಳ ಕಾಲ ನಡೆದ ಗಗನಚುಕ್ಕಿ ಜಲಪಾತೋತ್ಸವ ಕಾರ್ಯಕ್ರಮಕ್ಕೆ ವರ್ಣರಂಜಿತ ತೆರೆ ಬಿದಿದ್ದು, ಇದರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಂಡವು.

ಭಾನುವಾರ ರಜೆ ಹಿನ್ನೆಲ್ಲೆಯಲ್ಲಿ ಬೆಂಗಳೂರು, ಮೈಸೂರು, ಚಾಮರಾಜನಗರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಿಂದ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನಿರೀಕ್ಷೆಗೂ ಮೀರಿ ಬಂದಿದ್ದ ಸಾವಿರಾರು ಪ್ರವಾಸಿಗರು ಪರಿಸರ ಹಾಗೂ ಸಾಂಸ್ಕೃತಿಕ ರಸದೌತಣವನ್ನು ಸವಿದರು.

ಹಾಲಿನ ನೊರೆಯಂತೆ ದುಮ್ಮಿಕ್ಕಿ ಹರಿಯುವ ಜಲಸಿರಿ ಹಾಗೂ ವಿವಿಧ ಬಣ್ಣದ ಚಿತ್ತಾರದ ನಡುವೆ ಹಮ್ಮಿಕೊಳ್ಳಲಾಗಿದ್ದ ಲೇಸರ್ ಶೋ ಪ್ರವಾಸಿಗರ ಮನಸೂರೆಗೊಂಡಿತು. ಭಾನುವಾರ ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೩ ಗಂಟೆವರೆಗೆ ಜಿಲ್ಲೆಯ ವಿವಿಧ ಕಲಾವಿದರ ಪ್ರದರ್ಶನ ಗಮನ ಸೆಳೆಯಿತು. ಖ್ಯಾತ ಜಾನಪದ ಗಾಯಕ ಮಳವಳ್ಳಿ ಮಹದೇವಸ್ವಾಮಿ ಅವರ ಗಾಯನ ಜನರ ಮನ ಸೆಳೆಯಿತು.

ನಂತರ ಜಾನಪದ ಕಲಾವಿದರಾದ ಸವಿತಕ್ಕ, ಹರ್ಷ, ಕಂಬದ ರಂಗಯ್ಯ ಹಾಗೂ ಮಲ್ಲಿಕಾರ್ಜುನ ಕೆಂಕೆರೆ ಕಾರ್ಯಕ್ರಮ ನಡೆಸಿದರು. ತಾಲ್ಲೂಕಿನ ಹಲಗೂರು, ಕಿರುಗಾವಲು, ಬಿ.ಜಿ.ಪುರ, ಮಳವಳ್ಳಿ ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಿಗೆ ನೂರಾರು ಬಸ್‌ಗಳ ಮೂಲಕ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ಡಿವೈಎಸ್‌ಪಿ ವಿ.ಕೃಷ್ಣಪ್ಪ ನೇತೃತ್ವದಲ್ಲಿ ನೂರಾರು ಪೊಲೀಸರು ಭದ್ರತೆ ಕಲ್ಪಿಸಿದ್ದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

6 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

6 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

6 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

6 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

6 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

7 hours ago